ರಾಜ್ಯದಲ್ಲಿ ಇಂದು 406 ಕೇಸ್- ಬೆಂಗಳೂರಿನಲ್ಲಿ 156 ಪ್ರಕರಣ, 5 ಸಾವು

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 406 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 156 ಮಂದಿಗೆ ಸೋಂಕು ತಗುಲಿದ್ದು, 5 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ 637 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 10,154 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,81,027 ಮಂದಿಗೆ ಕೊರೊನಾ ಬಂದಿದೆ. 29,32,959 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.46ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.35ರಷ್ಟಿದೆ. ಇದನ್ನೂ ಓದಿ: VVIPಗಳಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ- ಭಕ್ತರ ಆಕ್ರೋಶ

ಇಂದು ರಾಜ್ಯದಲ್ಲಿ ಒಟ್ಟು 1,57,197 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,365 ಸ್ಯಾಂಪಲ್ (ಆರ್‍ಟಿ ಪಿಸಿಆರ್ 93,199 + 21,166 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 8 ಜಿಲ್ಲೆಗಳಾದ ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಭಾರತದಲ್ಲಿ 2022ರ ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ: ಕೇಂದ್ರ ಸಚಿವ ನಖ್ವಿ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 4, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 156, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 11, ಚಿತ್ರದುರ್ಗ 2, ದಕ್ಷಿಣ ಕನ್ನಡ 38, ದಾವಣಗೆರೆ 4, ಧಾರವಾಡ 7, ಗದಗ 0, ಹಾಸನ 32, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 4, ಕೊಪ್ಪಳ 0, ಮಂಡ್ಯ 11, ಮೈಸೂರು 56, ರಾಯಚೂರು 1, ರಾಮನಗರ 3, ಶಿವಮೊಗ್ಗ 11, ತುಮಕೂರು 13, ಉಡುಪಿ 18, ಉತ್ತರ ಕನ್ನಡ 12 ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *