ಮಾದಪ್ಪನ ಕ್ಷೇತ್ರದ ಆನೆ ಉಮಾಮಹೇಶ್ವರಿಗೆ 5 ಲಕ್ಷ ರೂ. ಆರೋಗ್ಯ ವಿಮೆ

Public TV
1 Min Read

ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ (Male Mahadeshwara Temple) ಆನೆ ಉಮಾಮಹೇಶ್ವರಿಗೆ (Umamaheshwari) ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ (Health Insuranace)ಮಾಡಿಸಿದೆ.

ಉಮಾಮಹೇಶ್ವರಿಗೆ 5 ಲಕ್ಷ ರೂ. ಮೌಲ್ಯದ ವಿಮೆ ಮಾಡಿಸಲಾಗಿದ್ದು, ವರ್ಷಕ್ಕೆ 11 ಸಾವಿರ ರೂ. ಅನ್ನು ಪ್ರಾಧಿಕಾರ ಪಾವತಿಸಲಿದೆ. ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್ಷದ ಹೆಣ್ಣಾನೆಯ ಆರೋಗ್ಯ ತಪಾಸಣೆ ಮಾಡಿಸಿದರು. ಪಶುವೈದ್ಯರು ತಪಾಸಣೆ ಮಾಡಿದ್ದು, ಆನೆ (Elephant) ಆರೋಗ್ಯದಿಂದ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುತ್ತಿರುವ ರಾಜ್ಯದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

ಅರಣ್ಯ ಇಲಾಖೆಯ ನಿಯಮದ ಪ್ರಕಾರ ಸಾಕಾನೆಗೆ ವಿಮೆ ಮಾಡಿಸಬೇಕು. ಎರಡೂವರೆ ವರ್ಷಗಳಿಂದ ಈ ಆನೆಗೆ ವಿಮೆ ಮಾಡಿರಲಿಲ್ಲ. ಈಗ ಆರೋಗ್ಯ ತಪಾಸಣೆ ಮಾಡಿಸಿ, ವಿಮೆ ಮಾಡಿದ್ದೇವೆ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಸ್.ಕಾತ್ಯಾಯಿನಿದೇವಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಹಲವಾರು ವರ್ಷಗಳಿಂದ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ ಉಮಾಮಹೇಶ್ವರಿ ಆನೆ ಭಕ್ತರಿಗೂ ಅಚ್ಚುಮೆಚ್ಚಾಗಿದೆ. ಇದನ್ನೂ ಓದಿ: Odisha Train Tragedy; ಪುಣ್ಯಕ್ಷೇತ್ರಕ್ಕೆ ಹೊರಟಿದ್ದ ಚಿಕ್ಕಮಗಳೂರಿನ 110 ಮಂದಿ ಯಾತ್ರಾರ್ಥಿಗಳು ಸೇಫ್

 

Share This Article