ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಲ್ಲಿ (Basavasagar reservoir) ಒಳಹರಿವು ಹೆಚ್ಚಾಗಿದ್ದು ಕೃಷ್ಣಾ ನದಿಗೆ (Krishna River) 5 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.ಇದನ್ನೂ ಓದಿ: ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯ 33.33 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ ಜಲಾಶಯದಲ್ಲಿ 27.80 ಟಿಎಂಸಿ ನೀರು ಸಂಗ್ರಹವಾಗಿದೆ.
ಸದ್ಯ ಜಲಾಶಯಕ್ಕೆ 20 ಸಾವಿರ ಕ್ಯುಸೆಕ್ ನೀರಿನ ಒಳಹರಿವು ಇದ್ದು, ಒಂದು ಗೇಟ್ ಮೂಲಕ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜೊತೆಗೆ ನದಿ ಪಾತ್ರದ ಜನರು ನದಿ ತೀರಕ್ಕೆ ತೆರಳದಂತೆ ಹಾಗೂ ಜಾನುವಾರುಗಳನ್ನು ನದಿ ತೀರಕ್ಕೆ ಕರೆದುಕೊಂಡು ಹೋಗದಂತೆ ಕೃಷ್ಣಾ ಭಾಗ್ಯ ನಿಗಮ ಲಿಮಿಟೆಡ್ನ ಅಧಿಕಾರಿಗಳು ಸೂಚಿಸಿದೆ.ಇದನ್ನೂ ಓದಿ: ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು