ಲಾರಿ ಹರಿದು 5 ವರ್ಷದ ಬಾಲಕ ಸಾವು- ಮುಗಿಲು ಮುಟ್ಟಿದ ತಾಯಿಯ ಆಕ್ರಂದನ

Public TV
1 Min Read

ಮೈಸೂರು: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಐದು ಮಗುವಿನ ಮೇಲೆ ಲಾರಿ ಹರಿದು ಸಾವನ್ನಪ್ಪಿದ ದಾರುಣ ಘಟನೆ ಮೈಸೂರಿನ ಟಿ. ನರಸೀಪುರದ ವ್ಯಾಸರಾಜಪುರ ಬಳಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಕೆಂಚ ಎಂದು ಗುರುತಿಸಲಾಗಿದ್ದು, ಮೃತ ಬಾಲಕನ ಪೋಷಕರು ಕೆ.ಎಂ ದೊಡ್ಡಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಲಾರಿ ಹರಿದ ರಭಸಕ್ಕೆ ಬಾಲಕನ ದೇಹ ತುಂಡಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗುಲು ಮುಟ್ಟಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *