ಮಂಡ್ಯ: ಜೂನ್ ತಿಂಗಳಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್ಎಸ್ ಅಣೆಕಟ್ಟೆ (KRS Dam) ಭರ್ತಿಯಾಗುವ ಮೂಲಕ ಹೊಸ ಇತಿಹಾಸವನ್ನು ಬರೆದಿದೆ. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಕನ್ನಂಬಾಡಿ ಕಟ್ಟೆಗೆ 44,238 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಕೆಆರ್ಎಸ್ ಡ್ಯಾಂಗೆ 44,238 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ಡ್ಯಾನಿಂದ 50 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಂಡ್ಯ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಇರುವುದರ ಜೊತೆಗೆ ಆಸ್ತಿ- ಪಾಸ್ತಿ, ಜಾನುವಾರುಗಳ ರಕ್ಷಣೆ ಸಂಬಂಧ ಅಲರ್ಟ್ ಘೋಷಣೆ ಮಾಡಿದೆ. ಇದಲ್ಲದೇ ಕಾವೇರಿ ನದಿ ಪಾತ್ರದಲ್ಲಿ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿರ್ಬಂಧ ಹೇರಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ 4,800 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಕೆಆರ್ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲಿಯೇ ಭರ್ತಿಯಾಗಿರುವುದರಿಂದ ಇನ್ನುಮುಂದೆ ಬಂದ ಒಳಹರಿವನ್ನು, ಹೊರಹರಿವನ್ನಾಗಿ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆ ಸಹ ಇದೆ. ಇದನ್ನೂ ಓದಿ: ನಾನು ಸಿಎಂ ಆಗೋಕೆ ಗುರು ಬಲ ಬೇಕು, ಶನಿಕಾಟ ಕಡಿಮೆ ಆಗ್ಬೇಕು: ಸತೀಶ್ ಜಾರಕಿಹೊಳಿ