ಬೈಕ್, ರಿಕ್ಷಾಗೆ ಗುದ್ದಿದ ಕಾರ್ – 6 ಜನರ ಸಾವಿಗೆ ಕಾರಣವಾದ ಕಾಂಗ್ರೆಸ್ ಶಾಸಕನ ಅಳಿಯ

Public TV
1 Min Read

ಗಾಂಧಿನಗರ: ಗುಜರಾತ್‍ನ ಆನಂದ್‍ನಗರದಲ್ಲಿ ಗುರುವಾರ ಸಂಜೆ ನಡೆದ ಕಾರ್, ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ 6 ಮಂದಿ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಶಾಸಕ ಪುನಂಭಾಯಿ ಮಾಧಭಾಯಿ ಪರ್ಮಾರ್ ಅವರ ಅಳಿಯ ಖೇತನ್ ಪಾಧಿಯಾರ್ ಸಂಚರಿಸುತ್ತಿದ್ದ ಎಸ್‌ಯುವಿ ಕಾರ್, ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾದಲ್ಲಿದ್ದ ನಾಲ್ವರು ಮತ್ತು ಬೈಕ್‍ನಲ್ಲಿದ್ದ ಇಬ್ಬರು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಖೇತನ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಊಟ ನೀಡೋ ವಿಚಾರಕ್ಕೆ ಜಗಳ – ಬಾಮೈದನಿಂದಲೇ ಯೋಧನ ಕೊಲೆ

ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸದಸ್ಯರಾದ ವಿನಾ ವಿಪುಲ್ ಮಿಸ್ತ್ರಿ (44) ಆಕೆಯ ಇಬ್ಬರು ಹೆಣ್ಣುಮಕ್ಕಳಾದ ಜಿಯಾ (14), ಜಾನ್ವಿ (17), ರಿಕ್ಷಾ ಚಾಲಕ ಯಾಸಿನ್ ಮೊಹಮ್ಮದ್ ವೋಹ್ರಾ (38), ಬೈಕ್‍ನಲ್ಲಿದ್ದ ಯೋಗೇಶ್ ರಾಜೇಶ್ ಓಡ್ (20) ಮತ್ತು ಸಂದೀಪ್ ಠಾಕೂರ್ ಓಡ್ (19) ಮೃತ ದುರ್ದೈವಿಗಳು. ಇದನ್ನೂ ಓದಿ: ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *