ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ- ಚಕ್ರಕ್ಕೆ ಸಿಲುಕಿ ಮಗು ದುರ್ಮರಣ

Public TV
1 Min Read

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಸಿಮೆಂಟ್ ಲಾರಿ ಡಿಕ್ಕಿಯಾಗಿದ್ದು, ಆರು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸರ್ಕಾರಿ ಆಸ್ಪತ್ರೆ ಫ್ಲೈಓವರ್ ಬಳಿ ನಡೆದಿದೆ.

ಮಗು ತಂದೆ ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿತ್ತು. ಹೊಸಕೋಟೆ ಫ್ಲೈ ಓವರ್ ಬಳಿ ಹಿಂಬದಿಯಿಂದ ಸಿಮೆಂಟ್ ತುಂಬಿದ್ದ ಲಾರಿ ಅತೀ ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಡಿಕ್ಕಿ ರಭಸಕ್ಕೆ ಆರು ವರ್ಷದ ಕಂದಮ್ಮ ಲಾರಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾಳೆ.

ಇನ್ನೂ ಮಗುವಿನ ತಂದೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತ ಲಾರಿ ಚಾಲಕನ ಅಜಾಗರೂಕತೆಯಿಂದ ನಡೆದಿದ್ದು, ಘಟನೆ ನಡೆದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹೊಸಕೋಟೆ ಟ್ರಾಫಿಕ್ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *