ದೆಹಲಿಯಲ್ಲಿ ಭಾರೀ ಅಗ್ನಿ ದುರಂತ- 7 ಸಾವು, 60 ಗುಡಿಸಲು ಭಸ್ಮ

Public TV
1 Min Read

ನವದೆಹಲಿ: ರಾಷ್ಟ್ರ ರಾಜಧಾನಿಯ ಗೋಕುಲಪುರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪಿಎಸ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಈಶಾನ್ಯ ದೆಹಲಿ ಹೆಚ್ಚುವರಿ ಡಿಸಿಪಿ ಮಾತನಾಡಿ, ಘಟನೆ ನಡೆದಾಕ್ಷಣ ನಾವು ಕಾರ್ಯಪ್ರವೃತ್ತರಾಗಿದ್ದು, ಸ್ಥಳಕ್ಕೆ ತಲುಪಿದ್ದೆವು. ಜೊತೆಗೆ ಅಗ್ನಿ ಶಾಮಕದಳದವರನ್ನು ಸಂಪರ್ಕಿಸಿದ್ದೇವೆ. ಅವರು ಕೂಡ ಉತ್ತಮಾಗಿ ಸ್ಪಂದನೆ ನೀಡಿದ್ದಾರೆ. ಬೆಂಕಿಯನ್ನು ಸುಮಾರು 4 ಗಂಟೆ ವೇಳೆಗೆ ನಂದಿಸಿದ್ದೇವೆ. ಆದರೆ ಅಷ್ಟರಲ್ಲಾಗಲೇ 30 ಗುಡಿಸಲು ಸುಟ್ಟುಹೋಗಿದ್ದು, 7 ಜನರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

ಘಟನೆ ಕುರಿತು ಮಾಹಿತಿ ಕಲೆಹಾಕಿದ ಬಳಿಕ ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ

Share This Article
Leave a Comment

Leave a Reply

Your email address will not be published. Required fields are marked *