ಬಸ್ ಅಪಘಾತ- 7 ಸಾವು, 45 ಮಂದಿಗೆ ಗಾಯ

Public TV
1 Min Read

ಅಮರಾವತಿ: ಬಸ್ಸೊಂದು ಪ್ರಪಾತಕ್ಕೆ ಉರಳಿದ ಪರಿಣಾಮ 7 ಮಮದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಶನಿವಾರ ರಾತ್ರಿ ನಡೆದಿದೆ. ಚಾಲಕನ ಅಜಾಗರೂಕತೆಯೇ ಈ ಅವಘಡಕ್ಕೆ ಕಾರಣ ಎಂದು ಹೆಳಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತಿರುಪತಿಯಿಂದ 25 ಕಿ.ಮೀ ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.

52 ಮಂದಿಯಿದ್ದ ಬಸ್‌ ಮದುವೆ ಸಮಾರಂಭಕೆ ತೆರಳುತ್ತಿತ್ತು. ಘಾಟ್‌ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಸಮಯದಲ್ಲಿ ಬಸ್‌ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ.

ಘಟನೆ ಬಗ್ಗೆ ತಿರುಪತಿಯ ಪೊಲಿಸರೊಬ್ಬರು ಪ್ರತಿಕ್ರಿಯಿಸಿ, ಚಾಲಕನ ಅಜಾಗರೂಕತೆಯಿಂದ ಬಸ್ ಪ್ರಪಾತಕ್ಕೆ ಉರುಳಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

Share This Article
Leave a Comment

Leave a Reply

Your email address will not be published. Required fields are marked *