ರಾಜ್ಯದಲ್ಲಿ ಕೊರೊನಾ ಸ್ಫೋಟ; ಇಂದು ಒಂದೇ ದಿನ 78 ಕೇಸ್‌ – ಮಂಗಳೂರಿನಲ್ಲಿ 1 ಬಲಿ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ (Corona Virus) ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು (ಶುಕ್ರವಾರ) ಒಂದೇ ದಿನ 78 ಕೊರೊನಾ (Covid-19) ಸೋಂಕು ಪ್ರಕರಣಗಳು ವರದಿಯಾಗಿವೆ.

ಇಂದು ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 175 ಕ್ಕೆ ಏರಿಕೆಯಾಗಿದೆ. ಕೋವಿಡ್‌-19 ರಿಂದ ಗುಣಮುಖರಾಗಿ ಇಂದು 7 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.29 % ಗೆ ಏರಿಕೆಯಾಗಿದೆ. ಇದನ್ನೂ ಓದಿ: PublicTV Explainer: ಹೊಸ ವರ್ಷದ ಹೊತ್ತಲ್ಲೇ ದೇಶಕ್ಕೆ ಕಾಲಿಟ್ಟ ಕೊರೊನಾ ಹೊಸ ತಳಿ; ಏನಿದು ಜೆಎನ್‌.1? ಇದು ಅಪಾಯಕಾರಿಯೇ?

ಬೆಂಗಳೂರಿನಲ್ಲಿ ಇಂದು 68 ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ರಾಜಧಾನಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 156 ಕ್ಕೆ ತಲುಪಿದೆ.

ಶುಕ್ರವಾರ ಬೆಂಗಳೂರು ಗ್ರಾಮಾಂತರದಲ್ಲಿ 1, ಚಿಕ್ಕಮಗಳೂರಿನಲ್ಲಿ 4, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಮೈಸೂರಿನಲ್ಲಿ 1, ರಾಮನಗರದಲ್ಲಿ 2 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರದಲ್ಲಿ ಮಗುವಿಗೆ ಕೊರೊನಾ ಪಾಸಿಟಿವ್

Share This Article