79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

Public TV
1 Min Read

– ಮೊದಲ ಬಾರಿಗೆ ಇ-ಪಾಸ್ ಮೂಲಕ ಸಾರ್ವಜನಿಕರಿಗೆ ಪ್ರವೇಶ

ಬೆಂಗಳೂರು: ಇಂದು ದೇಶದೆಲ್ಲೆಡೆ 79ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಧ್ವಜಾರೋಹಣ ನೆರವೇರಿಸಿದರು.ಇದನ್ನೂ ಓದಿ: ಶರಣರ ನಾಡಿನ ಆರಾಧ್ಯದೈವ ಲಿಂಗೈಕ್ಯ – ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದರು. ಈ ಬಾರಿಯ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು 3 ಸಾವಿರ ಜನರಿಗೆ ಅವಕಾಶ ನೀಡಲಾಗಿದ್ದು, ಮೊದಲ ಬಾರಿಗೆ ಇ-ಪಾಸ್ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ಪ್ರವೇಶ ನೀಡಲಾಗಿದೆ.

ಇನ್ನೂ ಸಿಎಂ ಸಿದ್ದರಾಮಯ್ಯ ಭಾಷಣ ಬಳಿಕ ಮಾಣಿಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ 12ನೇ ಭಾರಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದರು.ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Share This Article