ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ – 8 ಮಂದಿ ಸಾವು, ಮೋದಿ ಸಂತಾಪ

Public TV
1 Min Read

ಕೋಲ್ಕತ್ತಾ: ದುರ್ಗಾದೇವಿ ಮೂರ್ತಿ ವಿಸರ್ಜನೆ (Durga Idol Immersion) ವೇಳೆ ಉಂಟಾದ ದಿಢೀರ್ ಪ್ರವಾಹದಿಂದ (Flood)  8 ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ (West Bengal)  ಜಲ್‍ಪೈಗುರಿಯಲ್ಲಿ (Jalpaiguri) ಬುಧವಾರ ರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳದ ಜಲ್‍ಪೈಗುರಿಯಲ್ಲಿ ನಿಯೋರಾ ನದಿಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ದುರ್ಗಾದೇವಿ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಏಕಾಏಕಿ ಪ್ರವಾಹ ಪರಿಸ್ಥಿತಿ ತಲೆದೂರಿದೆ. ದುರ್ಘಟನೆಯಲ್ಲಿ ಈಗಾಗಲೇ 8 ಮಂದಿ ಮರಣ ಹೊಂದಿದ್ದು, ನಾಪತ್ತೆಯಾದವರ ಪತ್ತೆ ಕಾರ್ಯಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ 5 ಮಂದಿ ನೀರುಪಾಲು

ಕಳೆದೆರಡು ದಿನದಿಂದ ಈ ಭಾಗದಲ್ಲಿ ಅಧಿಕ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ದಿಢೀರ್ ಆಗಿ ಉಂಟಾದ ಪ್ರವಾಹದಲ್ಲಿ ಅನೇಕ ಭಕ್ತರು ಕೊಚ್ಚಿಹೋಗಿದ್ದಾರೆ. 8 ಮಂದಿಯ ಮೃತದೇಹ ಪತ್ತೆಯಾಗಿದ್ದು, 50ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಲಾಗಿದೆ. 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಾವಣನ ಬದಲಾಗಿ, ಇಡಿ, ಸಿಬಿಐ ಪ್ರತಿಕೃತಿ ಸುಟ್ಟು ವಿಜಯದಶಮಿ ಆಚರಿಸಿದ ಕೈ ಕಾರ್ಯಕರ್ತರು

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳಿಂದ ರಕ್ಷಣಾ ಕಾರ್ಯಚರಣೆ ನಡಯುತ್ತಿದೆ. ದುರಂತದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *