ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

Public TV
1 Min Read

ಕೊಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ 10 ಕಡೆ ನಡೆದ ಘರ್ಷಣೆ ಹಿಂಸಾ ರೂಪ ಪಡೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಮುಂಜಾನೆ ಪ್ರಾರಂಭವಾದ ಚುನಾವಣೆಯಲ್ಲಿ ವಿವಿಧ ಬೂತ್‍ಗಳಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪರಸ್ಪರ ಹೊಡೆದಾಡಿದ್ದಾರೆ. ನಂತರ ಇದು ಹಿಂಸಾ ಸ್ವರೂಪ ಪಡೆದುಕೊಂಡಿದೆ. ಪ್ರದೇಶವೊಂದರಲ್ಲಿ ನಡೆದ ಬಾಂಬ್ ದಾಳಿಯಲ್ಲಿ 20 ಜನ ಗಾಯಗೊಂಡಿವುದು ವರದಿಯಾಗಿದೆ.

 

ಚುನಾವಣೆಗೂ ಮುನ್ನ 34%ರಷ್ಟು ಸ್ಥಾನಗಳಲ್ಲಿ ಅವಿರೋಧವಾಗಿ ಆಡಳಿತ ರೂಢ ತೃಣಮೂಲ ಕಾಂಗ್ರೆಸ್ ಸದಸ್ಯರು ಆಯ್ಕೆಯಾಗಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಈ ಬೆಳವಣಿಗೆ ನಂತರ ಪ್ರಾರಂಭವಾದ ಚುನಾವಣೆಯು ಹಿಂಸಾಚಾರ ಸ್ವರೂಪ ಪಡೆದುಕೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಉತ್ತರದ 24 ಪರಗಣದಿಂದ ಹಾಗೂ ದಕ್ಷಿಣದ ಬುದ್ರ್ವಾನ್, ಕೋಚ್‍ಬೆಹರ್‍ನಿಂದ 24 ಪರಗಣಗಳಿಂದ ರಾಜ್ಯ ಚುನಾವಣೆ ಆಯೋಗವು ದೂರು ದಾಖಲಿಸಿಕೊಂಡಿದೆ.

ಉತ್ತರ ಬಂಗಾಳದ ಕೊಚ್ಬೆಗಾರ್ ಜಿಲ್ಲೆಯ ಶುಕ್ತಾಬಾರಿ ಮತದಾನದ ಬೂತ್‍ನಲ್ಲಿ ನಡೆದ ಬಾಂಬ್ ದಾಳಿ ನಡೆದಿದ್ದು, ಒಬ್ಬ ಟಿಎಂಸಿ ಕಾರ್ಯಕರ್ತ, ಓರ್ವ ಮಹಿಳೆ ಸೇರಿದಂತೆ ಒಟ್ಟು 20 ಜನರು ಗಾಯಗೊಂಡಿದ್ದಾರೆ.

ಗುಂಪೊಂದು ಉತ್ತರ ಬಂಗಾಳದ ಅಲಿಪುರ್ದಾರ್ ಬೂತ್ ಸುತ್ತ ಗೆರೆ ಏಳೆದಿದ್ದು, ಇದನ್ನು ದಾಟದಂತೆ ಮತದಾರರಿಗೆ ಸೂಚಿಸಿದೆ. ಅಲ್ಲದೇ ದಿನ್ಹಾಟ್‍ದಲ್ಲಿ ಎರಡು ಗುಂಪುಗಳ ನಡುವಿನ ಕಲಹದಿಂದಾಗಿ ಕೆಲವು ಮತದಾರಿಗೆ ಗಾಯವಾಗಿದೆ.

ದಕ್ಷಿಣ ಪರಗಣದ ಭಾಂಗಾರ್‍ದಲ್ಲಿ ನಡೆದ ಘರ್ಷಣೆ ವೇಳೆ ಮಾಧ್ಯಮದ ವಾಹನಗಳಿಗೂ ಹಾನಿಯಾಗಿದೆ. ಬಿರ್ಪಾರಾದಲ್ಲಿ ಐದು ಜನ ಪತ್ರಕರ್ತರು ಗಾಯಗೊಂಡಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಟ್ರಿಗರ್ ಗ್ಯಾಸ್ ಬಳಕೆ ಮಾಡಿದ್ದಾರೆ. ಬುದ್ರ್ವಾನ್ ನಲ್ಲಿ ಬಿಜೆಪಿ ಹಾಗೂ ಸಿಪಿಎಂ ಕಾರ್ಯಕರ್ತರು ಬಾಂಬ್ ಹಾಗೂ ದೊಣ್ಣೆ ಹಿಡಿದು ಮತದಾರರನ್ನು ಹೆದರಿಸಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ವರದಿಯ ಪ್ರಕಾರ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *