ಕಣಿವೆ ರಾಜ್ಯದಲ್ಲಿ 8 ಭಯೋತ್ಪಾದಕರ ಹತ್ಯೆ- 4 ಮಂದಿ ಭದ್ರತಾ ಸಿಬ್ಬಂದಿಗಳಿಗೆ ಗಾಯ

Public TV
1 Min Read

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ ನಾಗ್ ಹಾಗೂ ಸೋಫಿಯಾನಾ ಜಿಲ್ಲೆಯಲ್ಲಿ ಭಾರತೀಯ ಯೋಧರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಸೋಫಿಯಾನ ಜಿಲ್ಲೆಯ ದ್ರಗ್ಗಾದ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಯೋಧರು 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಸದ್ಯ ಈ 7 ಮಂದಿಯ ಶವವನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಅನಂತ್ ನಾಗ್ ಜಿಲ್ಲೆಯಲ್ಲಿ ಶರಣಾಗಲು ಒಪ್ಪದ ಭಯೋತ್ಪಾದಕನ ಮೇಲೆ ಗುಂಡಿಕ್ಕಿದ್ದು, ಆತ ಮೃತಪಟ್ಟಿದ್ದಾನೆ. ಇನ್ನೋರ್ವ ಜೀವಂತವಾಗಿ ಯೋಧರ ಕೈಗೆ ಸಿಕ್ಕಿದ್ದಾನೆ ಅಂತ ಪೊಲೀಸ್ ಅಧಿಕಾರಿ ಎಸ್ ಪಿ ವೈದ್ ಟ್ವೀಟ್ ಮಾಡಿದ್ದಾರೆ.

ಅನಂತ್ ನಾಗ್, ಸೋಫಿಯಾನಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಯೋಧರ ಗುಂಡಿನ ಚಕಮಕಿಯಿಂದಾಗಿ 4 ಮಂದಿ ಭದ್ರತಾ ಸಿಬ್ಬಂದಿಗಳು ಕೂಡ ಗಾಯಗೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.

ಸೋಫಿಯಾನದಲ್ಲಿ ಇನ್ನೂ 3,4 ಭಯೋತ್ಪಾದಕರು ಅವಿತುಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮಧ್ಯರಾತ್ರಿ ಯೋಧರು ಈ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಓರ್ವ ಜೀವಂತವಾಗಿ ಸಿಕ್ಕಿದ್ದು, ಉಳಿದವರನ್ನು ಹತ್ಯೆ ಮಾಡಿದ್ದಾರೆ. ಈ ಮೊದಲು ಪೊಲೀಸರು ಭಯೋತ್ಪಾದಕರ ಕುಟುಂಬವನ್ನು ಸಂಪರ್ಕಿಸಿ, ಅವರು ಶರಣಾಗುವಂತೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಓರ್ವ ಶರಣಾಗಿದ್ದು, ಮತ್ತೋರ್ವ ನಿರಾಕರಿಸಿದ್ದನು. ಇದೀಗ ಈತ ಯೋಧರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದಾಗಿ ಸದ್ಯ ಶ್ರೀನಗರ-ಬನಿಹಾಲ್ ನಡುವಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ದಕ್ಷಿಣ ಕಾಶ್ಮೀರದಲ್ಲಿ ಅಂತರ್ಜಾಲ ಸೇವೆಯನ್ನು ಕೂಡ ರದ್ದುಗೊಳಿಸಲಾಗಿದೆ.

ಕಳೆದ 3 ದಿನಗಳಿದ ಹಲವು ಬಾರಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದರು ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಮೃತರಾಗಿ ಒಬ್ಬರು ಗಾಯಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *