ಗುಡಿಸಲಿಗೆ ಬೆಂಕಿ – 80 ವರ್ಷದ ವೃದ್ಧೆ ಸಜೀವ ದಹನ

Public TV
0 Min Read

ವಿಜಯಪುರ: ಗುಡಿಸಲು ಮನೆಗೆ ಬೆಂಕಿ ಬಿದ್ದು, ವೃದ್ಧೆಯೊಬ್ಬರು ಸಜೀವ ದಹನವಾದ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಏವಣಗಿ ಗ್ರಾಮದಲ್ಲಿ ನಡೆದಿದೆ.

ಸಂಗವ್ವ ಬಸಗೊಂಡಪ್ಪ ಕುಂಬಾರ(80) ಮೃತ ದುರ್ದೈವಿ. ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ದೀಪದಿಂದ ಬೆಂಕಿ ಹೊತ್ತಿಕೊಂಡು ಈ ಘಟನೆ ನಡೆದಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಇಂದು ಬೆಳಗ್ಗೆ ಸ್ಥಳೀಯರು ಹೋಗಿ ನೋಡಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಪೂರ್ಣ ತನಿಖೆಯ ನಂತರ ಸತ್ಯಾಸತ್ಯತೆ ಹೊರಬೀಳಲಿದೆ.

Share This Article
Leave a Comment

Leave a Reply

Your email address will not be published. Required fields are marked *