ಭೂಕುಸಿತ, ಕಡಲ್ಗೊರೆತ ತಡೆಗೆ 800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

Public TV
2 Min Read

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭೂ ಕುಸಿತ (Landslide) ಪ್ರದೇಶಗಳಿಗೆ ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byregowda) ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಭೂಕುಸಿತ, ಕಡಲು ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು 800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದರು. ಇದನ್ನೂ ಓದಿ: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಮಹಿಳೆ ಸಾವು

ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ತಡೆಗೋಡೆ ನಿರ್ಮಿಸುವ ಕೆಲಸ ನಡೆಯಬೇಕಿದೆ. ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗುತ್ತಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೂರು ಕೋಟಿಯಂತೆ 300 ಕೋಟಿ ರೂ. ಒದಗಿಸಲಾಗುವುದು. ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ತಡೆಗೋಡೆ ಹಾಗೂ ಪ್ರಕೃತಿ ವಿಕೋಪದ ಕಾಮಗಾರಿ ನಡೆಸಲು ವಿಳಂಬವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ತಿಂಗಳ ಬಳಿಕ ಹಾರಿದ ಬ್ರಿಟನ್‌ ಬಾನಾಡಿ – ಕೇರಳದಿಂದ ಆಸ್ಟ್ರೇಲಿಯಾಗೆ ಜಿಗಿದ F-35B ಜೆಟ್

ಉತ್ತರ ಕನ್ನಡ ಜಿಲ್ಲೆಯಲ್ಲಿನ 136ಕ್ಕೂ ಹೆಚ್ಚು ಮಳೆಮಾಪನ ಯಂತ್ರಗಳು ಹಾಳಾಗಿದೆ. ರಾಜ್ಯದ ಸುಮಾರು 1,500 ಸ್ಥಳಗಳಲ್ಲಿ ಮಳೆ ಮಾಪನ ಕೇಂದ್ರಗಳು ದುಸ್ಥಿತಿಯಲ್ಲಿವೆ. ಅವುಗಳನ್ನು ದುರಸ್ತಿ ಮಾಡಿಸುವ ಕೆಲಸ ನಡೆಯಲಿದೆ. ಯಂತ್ರಗಳು ಸಂಪೂರ್ಣ ಹಾಳಾಗಿದ್ದರೆ ಹೊಸ ಯಂತ್ರಗಳ ಅಳವಡಿಕೆ ನಡೆಯಲಿದೆ ಎಂದರು. ಇದನ್ನೂ ಓದಿ: ಬಾಲಕಿಗೆ ಪಾಗಲ್‌ ಪ್ರೇಮಿ ಲವ್‌ ಟಾರ್ಚರ್‌ – ಜನರ ಎದುರೇ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ

ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಲಾಗುತ್ತಿದೆ. ಜನರಿಗೆ ದಾಖಲೆಗಳು ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ 6 ತಿಂಗಳ ಒಳಗೆ ಎಲ್ಲ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಗಲಕೋಟೆ | ಸಹೋದರನ 3 ವರ್ಷದ ಮಗುವನ್ನು ಕತ್ತು ಸೀಳಿ ಕೊಂದ ಪಾಪಿ

ಭೂ ಕುಸಿತ ಪ್ರದೇಶಗಳ ಭೇಟಿ:
ಕಂದಾಯ ಸಚಿವರು ಮೊದಲು ಶಿರಸಿ ತಾಲೂಕಿನ ಬೆಣ್ಣೆಹೊಳೆ ಸೇತುವೆ, ಭೂಕುಸಿತ ಸಂಭವಿಸಿರುವ ಕುಮಟಾ ತಾಲೂಕಿನ ದೇವಿಮನೆ ಘಟ್ಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಆರ್‌ಎನ್‌ಎಸ್ ಇನ್‌ಫ್ರಾಸ್ಟ್ರಕ್ಟರ್ ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಪಾಟ್ನಾ | ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಇಬ್ಬರು ಆರೋಪಿಗಳ ಮೇಲೆ ಫೈರಿಂಗ್

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ ಉಪಸ್ಥಿತರಿದ್ದರು. ಇದನ್ನೂ ಓದಿ: ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು

Share This Article