– ಮಲೆ ಮಹದೇಶ್ವರ ಕಾಡಿನಲ್ಲಿ ಚಿರತೆ ಹತ್ಯೆ? ವರದಿ ಸಲ್ಲಿಸಲು ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕಳೆದ ಐದೂವರೆ ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಈ ಎಲ್ಲಾ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸಚಿವರು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವನ್ನಪ್ಪಿವೆ? ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ? ಅಸಹಜವಾಗಿ ಮೃತಪಟ್ಟ ಹುಲಿಗಳ ಸಾವಿಗೆ ಕಾರಣವೇನು? ಎಂಬ ಬಗ್ಗೆ ತನಿಖೆ ನಡೆದು ವರದಿ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್
ಮೃತಪಟ್ಟ ಯಾವುದಾದರೂ ಹುಲಿಗಳ ಅಂಗಾಂಗ ಅಂದರೆ ಉಗುರು, ಹಲ್ಲು ಇತ್ಯಾದಿ ತೆಗೆಯಲಾಗಿತ್ತೆ? ಹುಲಿಗಳ ಹತ್ಯೆ ಆಗಿದ್ದಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಆಗಿದೆಯೇ? ಎಷ್ಟು ಹುಲಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ? ಎಂಬ ವಿವರವನ್ನೂ ಕೇಳಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಕೇಸ್; IPS ಅಧಿಕಾರಿ ವಿಕಾಸ್ ಕುಮಾರ್ಗೆ ರಿಲೀಫ್ – ಅಮಾನತು ರದ್ದಿಗೆ CAT ಆದೇಶ
ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ? ಎಷ್ಟು ಪ್ರಕರಣಗಳು ತನಿಖಾ ಹಂತದಲ್ಲಿದೆ. ಯಾವ ಕಾರಣಕ್ಕೆ ತನಿಖೆ ವಿಳಂಬವಾಗಿದೆ ಎಂಬ ಸಂಪೂರ್ಣ ವಿವರವನ್ನು 10 ದಿನಗಳ ಒಳಗಾಗಿ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ – ಇಂದಿನಿಂದ 1 ತಿಂಗಳು ಸಂಪೂರ್ಣ ಬಂದ್
ಮಲೆ ಮಹದೇಶ್ವರ ಕಾಡಿನಲ್ಲಿ ಚಿರತೆ ಹತ್ಯೆ? ವರದಿ ಸಲ್ಲಿಸಲು ಸೂಚನೆ
ಮಲೆ ಮಹದೇಶ್ವರ ಕಾನನ ಪ್ರದೇಶದ ಹೂಗ್ಯಂನಲ್ಲಿ 5 ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿವೆ ಎನ್ನಲಾದ ಪ್ರಕರಣಕ್ಕೆ ಕೆಲವು ದಿನಗಳ ಮೊದಲು ಕೌದಳ್ಳಿ ವಲಯ, ರಾಮಾಪುರ-ಮಾರ್ಟಳ್ಳಿ ಗಡಿಯಲ್ಲಿ ಚಿರತೆಯೊಂದರ ಹತ್ಯೆ ಆಗಿತ್ತು ಮತ್ತು ಮೃತ ಚಿರತೆಯ ಕಾಲುಗಳನ್ನು ಕತ್ತರಿಸಲಾಗಿತ್ತು ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಕುರಿತಂತೆಯೂ ಎಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!
ಚಿರತೆಯ ಅಂಗಾಂಗ ಕತ್ತರಿಸಿರುವುದು ನಿಜವಾಗಿದ್ದಲ್ಲಿ ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕೈಗೊಳ್ಳಬೇಕಾದ ಕ್ರಮದ ಶಿಫಾರಸಿನೊಂದಿಗೆ 7 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸಚಿವರು ಸೂಚನೆ ನೀಡಿದ್ದಾರೆ.