ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳ ನರ್ತನ – ಬೆಳ್ತಂಗಡಿಯ ಬರ್ಕಜೆಯಲ್ಲಿ ಗಗ್ಗರ ಸೇವೆ

Public TV
2 Min Read

ಮಂಗಳೂರು: ಕರಾವಳಿಯಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಜನ ದೈವಾರಾಧನೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುತ್ತಾರೆ. ಹಾಗಾಗಿ ಇಂದಿಗೂ ಸುಮಾರು 450ಕ್ಕಿಂತಲೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹಳ ಅಪರೂಪವಾದ ನವಗುಳಿಗ ದೈವಗಳಿಗೆ ಗಗ್ಗರ ಸೇವೆಯೊಂದು ನಡೆದಿದೆ.

ಕರಾವಳಿ ಭಾಗದಲ್ಲಿ ಗುಳಿಗ ದೈವದ ಆರಾಧನೆಗೆ ವಿಶೇಷ ಆಕರ್ಷಣೆ ಇದೆ. ಗುಳಿಗ ದೈವದ ರೋಷಾವೇಷ ನೋಡೋದೇ ಒಂದು ರೋಮಾಂಚಕ ಅನುಭವ. ಸಾಮಾನ್ಯವಾಗಿ ಒಂದು ಗುಳಿಗ ದೈವಕ್ಕೆ ಆರಾಧನೆ ನಡೆಯುವುದು ಮಾಮೂಲಿ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟೆಡೆ ಗ್ರಾಮದ ಬರ್ಕಜೆಯಲ್ಲಿರುವ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ ನವ ಗುಳಿಗ ದೈವ ನೆಲೆಯೂರಿದೆ. ಒಂದೇ ದಿನ ಒಂದೇ ಬಾರಿ ಈ ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯುತ್ತದೆ. ಈ ಬಾರಿಯ ವಾರ್ಷಿಕ ಉತ್ಸವವೂ ಅತ್ಯಂತ ಯಶಸ್ವಿಯಾಗಿ ನಡೆಯಿತು. ಏಕಕಾಲದಲ್ಲಿ ಒಂಬತ್ತು ಮಂದಿ ದೈವ ನರ್ತಕರು ನವ ಗುಳಿಗನ ನೇಮೋತ್ಸವ ನಡೆಸಿಕೊಟ್ಟರು. ಈ ಅದ್ಭುತವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಇದನ್ನೂ ಓದಿ: ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು – ಡಿಕೆಶಿಗೆ ಜಮೀರ್ ಟಾಂಗ್

ದುರ್ಗಾಪರಮೇಶ್ವರಿಯ ಸನ್ನಿದಿಯ ಮುಂಭಾಗದಲ್ಲೇ ಈ ನವ ಗುಳಿಗನ ಸಾನಿಧ್ಯ ಇದ್ದು, ಈ ಹಿಂದೆ ಒಂದು ಗುಳಿಗ ದೈವಕ್ಕೆ ಮಾತ್ರ ನೇಮೋತ್ಸವ ನಡೆಯುತ್ತಿತ್ತು. ಆದ್ರೆ ಮೂರು ವರ್ಷದ ಹಿಂದೆ ಪ್ರಶ್ನಾ ಚಿಂತನೆಯಲ್ಲಿ ನವಗುಳಿಗ ದೈವ ಇಲ್ಲಿ ನೆಲೆಯೂರಿದೆ ಎಂದು ತಿಳಿದುಬಂದಿತ್ತು. ಹೀಗಾಗಿ ಕಳೆದ ಮೂರು ವರ್ಷಗಳಿಂದ ನವಗುಳಿಗ ದೈವಗಳಿಗೆ ಉತ್ಸವ ನಡೆಯುತ್ತಿದೆ. ಈ ನವ ಗುಳಿಗ ದೈವಗಳೇ ಕ್ಷೇತ್ರದ ರಕ್ಷಣೆಯನ್ನು ಮಾಡುತ್ತಿದ್ದು ನಂಬಿ ಬರುವ ಭಕ್ತರ ಸಂಕಷ್ಟಗಳನ್ನು ಸಹ ದೂರ ಮಾಡುತ್ತಿದೆ. ಕೇವಲ ಜಿಲ್ಲೆ ಮಾತ್ರವಲ್ಲದೇ ಹೊರೆ ಜಿಲ್ಲೆಯ ಭಕ್ತರು ಸಹ ಇಲ್ಲಿ ಬಂದು ಪ್ರಾರ್ಥನೆ ಮಾಡಿಕೊಂಡು ಇಷ್ಟಾರ್ಥಗಳನ್ನು ಸಿದ್ದಿಸಿಕೊಳ್ಳುತ್ತಾರೆ. ಇದನ್ನೂ ಓದಿ: ಜಮೀರ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು: ಡಿಕೆಶಿ

ರೋಷದಿಂದ ನರ್ತನ ನೀಡುವುದರಿಂದ ಗುಳಿಗ ದೈವದ ಆರಾಧನೆಗೆ ವಿಶೇಷ ಮಹತ್ವವಿದೆ. ಹೀಗಾಗಿ ಒಂದೇ ಕಡೇ ಏಕಕಾಲದಲ್ಲಿ ನವ ಗುಳಿಗನ ನರ್ತನಧಾರಿಗಳು ನೇಮೋತ್ಸವವನ್ನು ನಡೆಸಿಕೊಡುವುದೇ ಚಂದ.

Share This Article
Leave a Comment

Leave a Reply

Your email address will not be published. Required fields are marked *