ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
1 Min Read

ಬೆಂಗಳೂರು: ಇರಾನ್ (Iran) ಮತ್ತು ಇಸ್ರೇಲ್ (Israel) ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯದ (Karnataka) 9 ವಿದ್ಯಾರ್ಥಿಗಳು ಇರಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ರಾಜಧಾನಿ ಟೆಹರಾನ್‌ನಲ್ಲಿ (Tehran) ಜಫ್ರಾನಿಯಾ ಪ್ರದೇಶದ ತೌಫಿಕ್ ಅಲ್ಲೆಯಲ್ಲಿ 9 ಮಂದಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದರು. ಈ 9 ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ಕರ್ನಾಟಕ ನಾನ್ ರೆಸಿಡೆನ್ಸಿ ಪೋರಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.  ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

 


ಪೋರಂನ ಡೆಪ್ಯುಟಿ ಚೇರ್‌ಮನ್ ಡಾ. ಆರತಿ ಕೃಷ್ಣ ಅವರು ವಿದೇಶಾಂಗ ಸಚಿವ ಜೈಶಂಕರ್‌ (Jaishankar) ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

ಸದ್ಯ ಭಾರತಕ್ಕೆ ಮರಳಲು ಸಹಾಯ ಮಾಡಲು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಕರ್ನಾಟಕದ ವಿದ್ಯಾರ್ಥಿಗಳಾದ ನದೀಮ್ ಹುಸೇನ್, ಮೀರ್ ನಾಸರ್ ಹುಸೇನ್, ಸೈಯದ್ ಮೊಹಮ್ಮದ್ ಟಕಿ, ಮೀರ್ ಎಸಾಮ್ ರೆಜಾ, ಅಬ್ಬಾಸ್ ಅಸ್ಕರಿ, ಸೈಯದ್ ಮೊಹ್ಸಿನ್ ರೆಜಾ, ಮರ್ಯಮ್ ಫಾತಿಮಾ, ಡೇನಿಯಾ ಉಲ್ಫಾಟ್, ಅಬ್ಬಾಸ್ ಅಲಿ ಅವರು ತುರ್ತು ಸಹಾಯಕ್ಕೆ ಮನವಿ ಮಾಡಿದ್ದಾರೆ.

Share This Article