ಮಂಗಳೂರಿನಲ್ಲಿ 9 ಮಂದಿ ಶಂಕಿತರು ಅರೆಸ್ಟ್

Public TV
1 Min Read

ಮಂಗಳೂರು: ಹೈ ಅಲರ್ಟ್ ಘೋಷಣೆಯಾದ ಬೆನ್ನಲ್ಲೇ ಮಂಗಳೂರಿನ ಕದ್ರಿ ಲಾಡ್ಜ್ ಒಂದರಲ್ಲಿ ತಂಗಿದ್ದ ಒಂಬತ್ತು ಮಂದಿ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಕೇರಳ, ಮಡಿಕೇರಿ ಮತ್ತು ಮಂಗಳೂರು ಮೂಲದವರಾಗಿದ್ದು, ಟಿಯುವಿ 300 ಮಹೀಂದ್ರಾ ಕಾರಿನಲ್ಲಿ ಪಂಪ್ ವೆಲ್ ಲಾಡ್ಜ್ ಗೆ ಬಂದಿದ್ದರು. ಅಷ್ಟೇ ಅಲ್ಲದೆ ತಾವು ನ್ಯಾಷನಲ್ ಕ್ರೈಂ ಇನ್ವೆಸ್ಟಿಗೇಷನ್ ಬ್ಯೂರೋ ಅಧಿಕಾರಿಗಳು ಅಂತ ಹೇಳಿಕೊಂಡಿದ್ದರು. ಒಂಬತ್ತು ಜನರ ಪೈಕಿ 5 ಜನರು ಗನ್ ಹಿಡಿದಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಸಿ ಕ್ಯಾಮೆರಾ ಚೆಕ್ ಮಾಡಿ- ಉಗ್ರರ ದಾಳಿ ಹಿನ್ನೆಲೆ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ

ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಪಂಪ್ ವೆಲ್ ಲಾಡ್ಜ್ ದೌಡಾಯಿಸಿದ ಪೊಲೀಸರು ಶಂಕಿತ 9 ಜನರನ್ನು ಬಂಧಿಸಿದ್ದು, ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಶಂಕಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿ ರದ್ದು ಮಾಡಿರುವ ಹಿನ್ನೆಲೆ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ 9 ಜನ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿ, ವಸ್ತು, ವಾಹನ ಕಂಡು ಬಂದಲ್ಲಿ ವಶಕ್ಕೆ ಪಡೆದು ಪರಿಶೀಲನೆ ನಡೆಸಬೇಕು. ಕರಾವಳಿಯಲ್ಲಿ ಬಿಗಿ ಬಂದೋಬಸ್ತ್ ಇರಬೇಕು. ಪಿಜಿ, ಹಾಸ್ಟೆಲ್, ಅಪಾಟ್ರ್ಮೆಂಟ್, ಮಸೀದಿ, ದೇವಸ್ಥಾನಗಳ ಬಳಿ ಪೊಲೀಸರು ತಪಾಸಣೆ ನಡೆಸಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತರು, ಸಿಬ್ಬಂದಿಗೆ ಆದೇಶ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *