ಚೆನ್ನೈ: ತಮಿಳು ನಟ, ರಾಜಕಾರಣಿ ವಿಜಯ್ (Vijay) ರ್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ವಿಜಯ್ ರ್ಯಾಲಿ ಸಂದರ್ಭದಲ್ಲಿ ಮತ್ತೊಂದು ಮನಕಲಕುವ ಘಟನೆ ನಡೆದಿದೆ. ಅಪಾರ ಜನಸಂದಣಿಯಲ್ಲಿ 9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.
ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಬೆಂಬಲಿಗರನ್ನು ಉದ್ದೇಶಿಸಿ ವಿಜಯ್ ಮಾತನಾಡುವ ವೇಳೆ, ವ್ಯಕ್ತಿಯೊಬ್ಬ ಬಸ್ ಮೇಲೆ ಬಂದು ಬಾಲಕಿ ಕಾಣೆಯಾಗಿರುವ ಬಗ್ಗೆ ವಿಜಯ್ಗೆ ತಿಳಿಸುತ್ತಾನೆ. ಆಗ ನಟ ತಕ್ಷಣ ಮೈಕ್ನಲ್ಲಿ ಅನೌನ್ಸ್ ಮಾಡುತ್ತಾರೆ. ‘9 ವರ್ಷದ ಅಶ್ಮಿಕಾ ಹೆಸರಿನ ಬಾಲಕಿ ಕಾಣೆಯಾಗಿದ್ದಾಳೆ. ದಯವಿಟ್ಟು ಯಾರಿಗಾದರು ಕಂಡರೆ ಗಮನಕ್ಕೆ ತನ್ನಿ. ಪೊಲೀಸರೇ ಸಹಕರಿಸಿ’ ಎಂದು ವಿಜಯ್ ಮನವಿ ಮಾಡಿದ್ದರು. ಇದನ್ನೂ ಓದಿ: ವಿಜಯ್ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?
#WATCH | Tamil Nadu: A large number of people attended the campaign of TVK (Tamilaga Vettri Kazhagam) chief and actor Vijay in Karur
A stampede-like situation reportedly occurred here. Several people fainted and were taken to a nearby hospital. More details are awaited.… pic.twitter.com/4f2Gyrp0v5
— ANI (@ANI) September 27, 2025
ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಕರೂರಿನಲ್ಲಿ ಬೃಹತ್ ರ್ಯಾಲಿ ನಡೆಸಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಮಕ್ಕಳು, ಮಹಿಳೆಯರೆನ್ನದೇ 1 ಲಕ್ಷಕ್ಕೂ ಹೆಚ್ಚು ಮಂದಿ ರ್ಯಾಲಿಯಲ್ಲಿ ಜಮಾಯಿಸಿದ್ದರು. ಈ ವೇಳೆ ತಳ್ಳಾಟ-ನೂಕಾಟವಾಗಿ ಕಾಲ್ತುಳಿತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ತಮಿಳು ನಟ ವಿಜಯ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು