ವಿಜಯಪುರದಲ್ಲಿ ಭಾರೀ ಮಳೆ: ಶಾಲೆಯಿಂದ ಬರುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋದ್ಳು ಬಾಲಕಿ

Public TV
1 Min Read

ವಿಜಯಪುರ: ಮಳೆಯಿಂದ ಹಳ್ಳ ದಾಟುವ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬಳು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕೊಟ್ಯಾಳ ಗ್ರಾಮದಲ್ಲಿ ನಡೆದಿದೆ.

ಶಾಲೆಯಿಂದ ಮನೆಗೆ ಮರುಳುತ್ತಿದ್ದ ವೇಳೆ ಈ ದುರಂತ ನಡೆದಿದ್ದು, ಐಶ್ವರ್ಯಾ ಸೋಲಂಕರ್ (9) ಮೃತಪಟ್ಟಿದ್ದಾಳೆ.

ಐಶ್ವರ್ಯಾ ಮತ್ತು ಗೀತಾ ಸೋಲಂಕರ್ ಶಾಲೆ ಮುಗಿಸಿ ಸಂಜೆ ಮನೆಗೆ ಬರುತ್ತಿದ್ದರು. ಕಿರು ಸೇತುವೆ ಮೇಲೆ ನಡೆಯುತ್ತಿದ್ದಾಗ ನೀರು ಬಂದಿದ್ದು ಇಬ್ಬರು ನೀರಿಗೆ ಬಿದ್ದಿದ್ದಾರೆ. ಇವರ ಹಿಂದೆಯೇ ಬರುತ್ತಿದ್ದ ಜನರು ಈ ದೃಶ್ಯವನ್ನು ನೋಡಿ ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಅಷ್ಟರಲ್ಲಾಗಲೇಐಶ್ವರ್ಯಾ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದಳು. ನೀರಿನಲ್ಲಿ  ಸಹಾಯ ಬೇಡುತ್ತಿದ್ದ ಗೀತಾಳನ್ನು ಜನರು ಕೂಡಲೇ ರಕ್ಷಣೆ ಮಾಡಿದ್ದಾರೆ.

ಕೂಡಲೇ ಬುಲಾವ್ ಬಂದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಐಶ್ವರ್ಯಾಳ ಶವವನ್ನು ನೀರಿನಿಂದ ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ರಾಮಚಂದ್ರ ಚೌಧರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ಐಶ್ವರ್ಯಾ ಶವವವನ್ನು ಜಿಲ್ಲಾಸ್ಪತ್ರೆಗೆ ತರಲಾಗಿದೆ.

ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳ್ಳಗಳು ತುಂಬಿ ಹರಿಯುತ್ತಿದೆ.

 

Share This Article
Leave a Comment

Leave a Reply

Your email address will not be published. Required fields are marked *