ಬಂಡೀಪುರದಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವು

Public TV
1 Min Read

ಚಾಮರಾಜನಗರ: ಲಾರಿ (Lorry) ಡಿಕ್ಕಿ ಹೊಡೆದು ಹೆಣ್ಣಾನೆ (Elephant) ಸಾವನ್ನಪ್ಪಿದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಬಂಡೀಪುರದಲ್ಲಿ (Bandipur) ನಡೆದಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವಲಯದ ಬಳಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಸ್ತೆಯಲ್ಲಿ ನಡೆದಿರುವ ರಾತ್ರಿ ಸಂಚಾರ ನಿಷೇಧವಿದೆ. ಆದರೂ ಲಾರಿಯೊಂದು ರಭಸವಾಗಿ ಚಲಿಸುತ್ತಿತ್ತು. ಈ ವೇಳೆ ರಸ್ತೆಯ ಮಧ್ಯದಲ್ಲಿ‌ ಇದ್ದ ಆನೆಗೆ ಲಾರಿ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

ಲಾರಿ ಡಿಕ್ಕಿಯಿಂದ ರಸ್ತೆಯಲ್ಲೇ ಆನೆ ಮೃತಪಟ್ಟಿದೆ‌. ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಲಾರಿಯು ಕೇರಳದಿಂದ ಗುಂಡ್ಲುಪೇಟೆ ಆಗಮಿಸುತ್ತಿತ್ತು ಎಂದು‌ ತಿಳಿದುಬಂದಿದೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ – ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *