100 ದಿನ ಪೂರೈಸಿದ ಭಾರತ್ ಜೋಡೋ ಯಾತ್ರೆ – ಇದು ಮಹಾಸಾಧನೆ ಅಂದ್ರು ಕಾಂಗ್ರೆಸ್ ನಾಯಕರು

Public TV
2 Min Read

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು (Bharat Jodo Yatra) ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ. ಕಾಂಗ್ರೆಸ್ ನಾಯಕರು ಹರ್ಷಗೊಂಡಿದ್ದು, ಭಾರತ್ ಜೋಡೋ ಯಾತ್ರೆಯು ಜನಸಾಮಾನ್ಯರಿಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಪ್ರತಿಪಾದಿಸಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇಂದು ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಯುತ್ತಿದ್ದು, ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ (KC Venugopal), ಸಚಿನ್ ಪೈಲಟ್ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: ಪಕ್ಷಕ್ಕೆ ತೊಂದರೆಯಾದ್ರೆ ನೀವಿಬ್ಬರೇ ಕಾರಣ – ಸಿದ್ದು, ಡಿಕೆಶಿಗೆ ಕೆ.ಸಿ ವೇಣುಗೋಪಾಲ್ ಖಡಕ್ ವಾರ್ನಿಂಗ್

ಈ ಕುರಿತು ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ದೇಶದ ಜನಸಾಮಾನ್ಯರ ಸಮಸ್ಯೆಗಳನ್ನು ಎತ್ತಿ ತೋರಿಸಿರುವುದು ಜೋಡೋ ಯಾತ್ರೆಯ ದೊಡ್ಡ ಸಾಧನೆ. ಅಲ್ಲದೇ ಗಾಂಧಿ ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬಿಜೆಪಿ (BJP) ಪ್ರಯತ್ನವನ್ನೂ ನಾಶಪಡಿಸಿದ್ದೇವೆ ಎಂದು ಬೀಗಿದ್ದಾರೆ. ಇದನ್ನೂ ಓದಿ: ರಸ್ತೆಗಿಳಿಯಲಿದೆ ಟೋಯಿಂಗ್ ವಾಹನಗಳು – BBMP ನಿರ್ಧಾರಕ್ಕೆ ವಾಹನ ಸವಾರರು ಗರಂ

ಸೆಪ್ಟಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸೇರಿ 8 ರಾಜ್ಯಗಳಲ್ಲಿ ಸಂಚರಿಸಿದ್ದು, ಈಗ ರಾಜಸ್ಥಾನದಲ್ಲಿ ಸಂಚರಿಸುತ್ತಿದೆ.

ಈಗಾಗಲೇ 2,800 ಕಿಮೀ ಕ್ರಮಿಸಿರುವ ರಾಹುಲ್‌ಗಾಂಧಿ ಹಾಗೂ ಬೆಂಬಲಿಗರು ವಿರೋಧಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 24 ರಂದು ಯಾತ್ರೆ ದೆಹಲಿ ಪ್ರವೇಶಿಸಲಿದ್ದು, 8 ದಿನಗಳ ವಿರಾಮದ ನಂತರ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *