ಬ್ಯೂಟಿಫುಲ್ ಹುಡುಗಿಯರ ಜೊತೆ ಬಾನ ದಾರಿಯಲ್ಲಿ ಕುಣಿದ ಗೋಲ್ಡನ್ ಸ್ಟಾರ್

Public TV
2 Min Read

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ  ‘ಬಾನದಾರಿಯಲ್ಲಿ’ ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಕವಿರಾಜ್ ಬರೆದಿರುವ ‘ನಿನ್ನನ್ನು ನೋಡಿದ ನಂತರ’ ಎಂಬ ಗೀತೆ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಬಗ್ಗೆ ಮಾತನಾಡಿದರು.

‘ಇದು ಕೊರೋನ ಸಮಯದಲ್ಲಿ ಅಂದರೆ ಸುಮಾರು ಎರಡುವರೆ ವರ್ಷಗಳ ಹಿಂದೆ ನಾನು ಹಾಗೂ ಪ್ರೀತಾ ಜಯರಾಂ ಸೇರಿ ಮಾಡಿದ ಕಥೆ. ರಾಜ್ಯದ ನಾನಾ ಭಾಗಗಳಲ್ಲಿ ಶೂಟಿಂಗ್ ಮಾಡಿ ಇದೀಗ ಸಂಪೂರ್ಣ ಚಿತ್ರೀಕರಣ ಮುಗಕ್ತಾಯವಾಗಿದೆ. ನಾವು ಅಂದುಕೊಂಡಿದ್ದಕ್ಕಿಂತಲೂ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಸಿನಿಮಾದ ಮೊದಲ ಹಾಡನ್ನು ಈಗ ಬಿಡುಗಡೆ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು’ ನಿರ್ದೇಶಕ  ಪ್ರೀತಂ ಗುಬ್ಬಿ. ಇದನ್ನೂ ಓದಿ: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

ನಾಯಕನ ನಟ ಗಣೇಶ್ ಮಾತನಾಡಿ, ‘ ಈ ಹಾಡನ್ನು ಕವಿರಾಜ್ ಬರೆದಿದ್ದಾರೆ. ಹುಡುಗಾಟ ಚಿತ್ರದ ಮಂದಾಕಿನಿಯೇ ಹಾಡಿನಿಂದ ಶುರುವಾದ ನಮ್ಮ ಜರ್ನಿ ಈ ಹಾಡಿನ ತನಕ ಮುಂದುವರೆದಿದೆ. ನನ್ನ ಅನೇಕ ಹಿಟ್ ಹಾಡುಗಳನ್ನು ಕವಿರಾಜ್ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರದ ಮತ್ತೊಂದು ಹೈಲೆಟ್ . ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿದ್ದಾರೆ. ಸಾಮಾನ್ಯವಾಗಿ ನಾನು ಡಬ್ಬಿಂಗ್ ಸಮಯದಲ್ಲಿ ಚಿತ್ರದ ಬಗ್ಗೆ ಹೇಳಿ ಬಿಡುತ್ತೇನೆ. ಈ ಚಿತ್ರದ ಡಬ್ಬಿಂಗ್ ಮಾಡಬೇಕಾದರೆ ಕೆಲವೊಮ್ಮೆ ತುಂಬಾ ಭಾವುಕನಾದೆ. ನಾಯಕಿಯರಾದ ರುಕ್ಮಿಣಿ ವಸಂತ್ ಹಾಗೂ ರೀಷ್ಮಾ ನಾಣಯ್ಯ ಸೇರಿದಂತೆ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಕೀನ್ಯಾ ಭಾಗದ  ಚಿತ್ರೀಕರಣವನ್ನು  ಮರೆಯಲು ಸಾಧ್ಯವಾಗುತ್ತಿಲ್ಲ. ನಾನು ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ ಗಣೇಶ್.

ಚಿತ್ರ ತುಂಬಾ ಚೆನ್ನಾಗಿದೆ. ಇಂದು ಬಿಡುಗಡೆಯಾಗಿರುವ ಹಾಡು ಅಷ್ಟೇ ಇಂಪಾಗಿದೆ. ನಾನು ಈ ಹಾಡಿಗಾಗಿ ಸರ್ಫಿಂಗ್ ಅಭ್ಯಾಸ ಮಾಡಿದ್ದೇನೆ ಎಂದು ನಾಯಕಿ ರುಕ್ಮಿಣಿ ವಸಂತ್ ಹೇಳಿದರೆ, ಗಣೇಶ್ ಹಾಗೂ ರಂಗಾಯಣ ರಘು ಅವರು ನನಗೆ ಸಾಕಷ್ಟು ಹೇಳಿಕೊಟ್ಟಿದ್ದಾರೆ.  ಕಳೆದ ವರ್ಷ ಅನೇಕ ಕನ್ನಡ ಚಿತ್ರಗಳು ಗೆದ್ದು ದಾಖಲೆ ನಿರ್ಮಿಸಿವೆ. ಈ ವರ್ಷವೂ ಎಲ್ಲಾ ಕನ್ನಡ ಚಿತ್ರಗಳು ದೊಡ್ಡಮಟ್ಟದ ಯಶಸ್ಸು ಕಾಣಲಿ. ಅದರಲ್ಲಿ ಬಾನದಾರಿಯಲ್ಲಿ ಚಿತ್ರವೂ ಇರಲಿ ಎನ್ನುತ್ತಾರೆ ಚಿತ್ರದ ಮತ್ತೊಬ್ಬ ನಾಯಕಿ ರೀಷ್ಮಾ ನಾಣಯ್ಯ.

ಬಾನದಾರಿಯಲ್ಲಿ ಹಾಡು ಹುಟ್ಟಿದ ಸಮಯವನ್ನು ವರ್ಣಿಸಿದ  ಗೀತರಚನೆಕಾರ ಕವಿರಾಜ್, ಮುಂಬೈನ ಖ್ಯಾತ ಯಶ್ ರಾಜ್ ಸ್ಟುಡಿಯೋದಲ್ಲಿ ಈ ಹಾಡಿನ ರೆಕಾರ್ಡಿಂಗ್ ನಡೆದಿದೆ. ಖ್ಯಾತ ಗಾಯಕ ಸೋನು ನಿಗಮ್ ಸುಮಧುರವಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ ಎಂದು ತಿಳಿಸಿದರು.  ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಅನುಭವ ಹಂಚಿಕೊಂಡರು. ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಸಂತೋಷ್ ಹಾಗೂ ವೇಣು ಬಂಡವಾಳ ಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *