ಮೋದಿ ರಾಜ್ಯ ಭೇಟಿ ವೇಳೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಮಾಜಿ ಸಿಎಂರನ್ನೇ ಕಣಿಗಣಿಸಿತಾ ಪಕ್ಷ..?

Public TV
2 Min Read

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ಬಿಜೆಪಿಯಲ್ಲಿ ಸೈಡ್‍ಲೈನ್ ಆಗ್ತಿದ್ದಾರಾ..? ಶೆಟ್ಟರ್‍ಗೆ ಈ ಬಾರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ (Hubballi- Dharwad Central Constituency) ದ ಟಿಕೆಟ್ ಕೈ ತಪ್ಪಿಸುವ ಹುನ್ನಾರ ಅವರದೆ ಪಕ್ಷದಲ್ಲಿ ನಡೆದಿದೆಯಾ ಎನ್ನುವ ಅನುಮಾನ ಮೂಡಿದೆ.

ಹೌದು. ರಾಜ್ಯ ಬಿಜೆಪಿ (Karnataka BJP) ಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೈಡ್‍ಲೈನ್ ಆಗುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ. ಸ್ವತಃ ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿಯೇ ಪ್ರಧಾನಿ ಮೋದಿಯವರ ಕಾರ್ಯಕ್ರಮ ನಡೆಯುತ್ತಿದ್ದರೂ, ಶೆಟ್ಟರ್‍ಗೆ ಮಾತ್ರ ವೇದಿಕೆ ಮೇಲೆ ಅವಕಾಶ ಕಲ್ಪಿಸಿಲ್ಲ. ಈ ಬಗ್ಗೆ ವೇದಿಕೆ ಕಾರ್ಯಕ್ರಮದ ಆಮಂತ್ರಣ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ನಿಜ ಅಂತ ಶೆಟ್ಟರ್ ಒಪ್ಪಿಕೊಂಡಿದ್ದಾರೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಬಿಜೆಪಿ ಹಿರಿಯ ನಾಯಕರಲ್ಲಿ ಎಲ್ಲವೂ ಸರಿಯಿಲ್ಲ ಎಂಬುವುದು ಕಂಡು ಬರುತ್ತಿದೆ. ಜೊತೆಗೆ ಶೆಟ್ಟರ್ ಗೆ ಈ ಬಾರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿಸುವ ಹುನ್ನಾರ ಅವರದ್ದೇ ಪಕ್ಷದಲ್ಲಿ ನಡೆದಿದೆಯಾ ಎನ್ನುವ ಅನುಮಾನ ಮೂಡಿದೆ.

ಶೆಟ್ಟರ್ ಗೆ ಈ ರೀತಿಯ ಅಪಮಾನವಾಗುತ್ತಿರುವುದು ಇದೇ ಮೊದಲೇನಲ್ಲಾ, ಈ ಹಿಂದೆ ಹುಬ್ಬಳ್ಳಿಗೆ ರಾಷ್ಟ್ರಪತಿಗಳು ಬಂದಾಗ ಅವರು ವೇದಿಕೆ ಕಾರ್ಯಕ್ರಮ ಸಹ ಶೆಟ್ಟರ್ ಕ್ಷೇತ್ರದಲ್ಲಿ ನಡೆದಿತ್ತು. ಹೀಗಿದ್ದರೂ ಶೆಟ್ಟರ್‍ಗೆ ವೇದಿಕೆ ಮೇಲೆ ಅವಕಾಶ ನೀಡಿರಲಿಲ್ಲ. ಈ ಕುರಿತು ಸುದ್ದಿಪ್ರಸಾರವಾದ ಬಳಿಕ ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

ಪಬ್ಲಿಕ್ ಟಿವಿ ಜೊತೆ ನೋವು ತೋಡಿಕೊಂಡ ಶೆಟ್ಟರ್, ಕಾರ್ಯಕ್ರಮದ ವೇದಿಕೆ ಮೇಲೆ ಅವಕಾಶ ನೀಡದ ಬಗ್ಗೆ ಡಿಸಿ ನನ್ನ ಜೊತೆಗೆ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ವೇದಿಕೆ ಮೇಲೆ ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ. ಒಟ್ಟಾರೆ ಶೆಟ್ಟರ್ ಅವರನ್ನು ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿ ಬೇಕಂತಲೇ ಹೊರಗಿಡುತ್ತಿದ್ಯಾ ಎಂಬ ಅನುಮಾನ ದಟ್ಟವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *