ನಾರಾಯಣಪುರ ಎಡದಂಡೆ ಕಾಲುವೆ ಆಧುನೀಕರಣ ದೇಶಕ್ಕೆ ಮಾದರಿ, ಇದೊಂದು ಮೈಲಿಗಲ್ಲು – ಬೊಮ್ಮಾಯಿ

Public TV
1 Min Read

ಬೆಂಗಳೂರು: ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ ಯೋಜನೆ (NLBC) ದೇಶದಲ್ಲಿಯೇ ಮಾದರಿಯಾಗಿದ್ದು, ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಮೈಲಿಗಲ್ಲು ಯೋಜನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಗುರುವಾರ ಪ್ರಧಾನಿ ಮೋದಿಯವರು (Narendra Modi) ರಾಜ್ಯಕ್ಕೆ ಆಗಮಿಸಲಿದ್ದು 2 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ ಯೋಜನೆಗೆ ಚಾಲನೆ ನೀಡುತ್ತಿದ್ದು, ಏಷ್ಯಾದಲ್ಲೇ ವಿಶಿಷ್ಟವಾದ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ಅನುಷ್ಠಾನಗೊಳಿಸಲಾಗಿದೆ. ಪ್ರಧಾನಿ ಮೋದಿಯವರು ಇಂತಹ ಮಹತ್ವದ ಯೋಜನೆಯನ್ನು ಲೋಕಾರ್ಪಣೆಗೊಳಿಸುವ ಮೂಲಕ ಇಂತಹ ಯೋಜನೆಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಗತಗೊಳಿಸಲು ಪ್ರೇರಣೆ ದೊರೆಯಲಿದೆ ಎಂದರು. ಇದನ್ನೂ ಓದಿ: ಭಾರತ್ ಜೋಡೋ ಎಂಟ್ರಿಗೂ ಮುನ್ನ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‍ಗೆ ಮುಜುಗರ

ಇದೇ ರೀತಿ ಸುಮಾರು 4-5 ದಶಕಗಳ ಬೇಡಿಕೆಯಾಗಿದ್ದ ಬಂಜಾರ ಮತ್ತು ಲಮಾಣಿ ಜನಾಂಗದ ತಾಂಡಾಗಳಿಗೆ ಗ್ರಾಮಗಳನ್ನು ಮಾಡಿ, ಮನೆಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಭಾಗವಹಿಸುತ್ತಿದ್ದಾರೆ. ಸಾಮಾಜಿಕವಾಗಿ ಪರಿವರ್ತನೆಯನ್ನು ತರುವಂತಹ ಬೃಹತ್ ಕಾರ್ಯಕ್ರಮ ಇದಾಗಲಿದೆ. ಈ ಜನಾಂಗದವರು ಅಲೆಮಾರಿಗಳಾಗಿ ಬದುಕದೇ, ಅವರ ಬದುಕಿಗೆ ಭದ್ರತೆ ಕೊಡುವಂತಹ ಉತ್ತಮ ಯೋಜನೆ ಇದಾಗಿದ್ದು, ಇಂತಹ ಯೋಜನೆಗಳಿಂದ ರಾಜ್ಯಕ್ಕೆ ಒಳಿತಾಗುತ್ತದೆ ಎಂದರು. ಇದನ್ನೂ ಓದಿ: ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರ ನಿಯಮವೇ ರಾಜ್ಯಾಧ್ಯಕ್ಷರಿಗೂ ಅನ್ವಯನಾ? ಕಟೀಲ್ ಅವಧಿ ವಿಸ್ತರಣೆ ಏನಾಗುತ್ತೆ?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *