ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ PHD ಪಡೆದಿದ್ದಾರೆ, ಬೆಂಗ್ಳೂರನ್ನ ಹಾಳು ಮಾಡಿದ್ದಾರೆ: ಬೊಮ್ಮಾಯಿ

Public TV
1 Min Read

ಬೆಳಗಾವಿ: ಕಾಂಗ್ರೆಸ್ (Congress) ನಾಯಕರು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ (PHD) ಪಡೆದಿದ್ದಾರೆ, ಬೆಂಗಳೂರನ್ನ ಹಾಳು ಮಾಡಿದ್ದಾರೆ. ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ ಎನ್ನುವಂತಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಗುಡುಗಿದ್ದಾರೆ.

ತಾಲೂಕಿನ ಸಾಂಬ್ರಾ ಏರ್ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ (Bengaluru) ಒತ್ತುವರಿ ಆಗಿದ್ದು, ರಾಜಕಾಲುವೆ ಮುಚ್ಚಿಹೋಗಿದ್ದು, ರಾಜಕಾಲುವೆ (Rajakaluve) ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದು ಹೀಗೆ ಹತ್ತು ಹಲವು ಹಗರಣ ಅವರ ಕಾಲದಲ್ಲಿ ಆಗಿವೆ. ಲೋಕಾಯುಕ್ತ ಮುಚ್ಚಿ ಹಾಕಿ ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಇದೆಲ್ಲವನ್ನೂ ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರ ಕಾಂಗ್ರೆಸ್‌ನ ಅವಿಭಾಜ್ಯ ಅಂಗ. ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವಾಗಿದೆ. ಅವರು ಒಂದು ಕಡೆ ಪ್ರತಿಭಟನೆ ಮಾಡಿದ್ರೆ ಯಾರೂ ಬರಲ್ಲ. ಆದ್ದರಿಂದ ಮುನ್ನೂರು ಕಡೆ ಮಾಡ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ – ಕಾಂಗ್ರೆಸ್ ಪಾಳಯಕ್ಕೆ ಮರ್ಮಾಘಾತ

ಲೋಕಾಯುಕ್ತ (Karnataka Lokayukta) ಎಂಬ ಇಂಡಿಪೆಂಡೆಂಟ್ ಬಾಡಿ ಮುಚ್ಚಿ ಹಾಕಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಟ್ಟಿದ್ದರು. ಅವರೇ ಮಾಡಿದ ಸ್ವಂತ ಭ್ರಷ್ಟಾಚಾರ ಮುಚ್ಚಿ ಹಾಕಿದ್ದರು. ಅವರ ವಿರುದ್ಧ ಇದ್ದ ಎಲ್ಲ ಕಂಪ್ಲೆಂಟ್ ಎಸಿಬಿಗೆ ಕೊಟ್ಟು ಮುಚ್ಚಿ ಹಾಕಿದ್ದರು. ಈಗ ಯರ‍್ಯಾರು ಕಂಪ್ಲೆಂಟ್ ಕೊಟ್ಟಿದ್ದಾರೋ ಅವೆಲ್ಲವೂ ಲೋಕಾಯುಕ್ತಕ್ಕೆ ರೆಫರ್ ಆಗಿ ಮತ್ತೆ ತನಿಖೆ ಆಗುತ್ತದೆ. ಅವರು ಅದರಲ್ಲಿ ಮೊದಲು ಸ್ವಚ್ಛವಾಗಿ ಬರಲಿ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *