Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

Public TV
1 Min Read

ಬೆಳಗಾವಿ: ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ ಭಾರತೀಯ ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮರಾದ ಘಟನೆ ನಡೆದಿದೆ.

ನಗರದ ಗಣೇಶಪುರದ ಸಂಭಾಜೀ ನಗರದ ನಿವಾಸಿ, ವಿಂಗ್ ಕಮಾಂಡರ್‌ ಹನುಮಂತರಾವ್ (Hanumanth Rao Sarathi) ಹುತಾತ್ಮರಾಗಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿ ಭಾರತೀಯ ವಾಯು ಪಡೆ (IAF) ವಿಷಾದ ವ್ಯಕ್ತಪಡಿಸಿದೆ. ಇದನ್ನೂ ಓದಿ: Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗಣೇಶಪುರದ ಹನುಮಂತರಾವ್ ಮನೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವಿಂಗ್ ಕಮಾಂಡರ್ ಸಾವಿನ‌ ಸುದ್ದಿ ತಿಳಿದ ಹನುಮಂತರಾವ್ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಧ್ಯಪ್ರದೇಶದ ಮೊರೆನಾ ಸಮೀಪ ಸುಖೋಯ್‌ 30 (Sukhoi) ಹಾಗೂ ಒಂದು ಮಿರಾಜ್‌ 2000 (Mirage) ಯುದ್ಧವಿಮಾನ ಪತನವಾಗಿತ್ತು. ಈ ಎರಡೂ ವಿಮಾನಗಳು ಗ್ವಾಲಿಯರ್‌ ವಾಯುನೆಲೆಯಿಂದ ಟೇಕಾಫ್‌ ಆಗಿದ್ದವು. ಘಟನೆಗೆ ಕಾರಣ ತಿಳಿಯಲು ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ಇದನ್ನೂ ಓದಿ: Plane Crash: ಬೆಂಕಿ ಕಾಣಿಸಿಕೊಂಡು ಪತನಗೊಂಡ ಚಾರ್ಟರ್ಡ್ ವಿಮಾನ – ಪೈಲಟ್‍ಗಾಗಿ ಹುಡುಕಾಟ

ವಾಯು ಪಡೆಯ ವಿಮಾನ ಸ್ಥಳಕ್ಕೆ ಧಾವಿಸಿ ‍‍ಪರಿಶೀಲನೆ ನಡೆಸಿತು. ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *