ಖಾಸಗಿ ಬಸ್, ಬೈಕ್ ನಡುವೆ ಭೀಕರ ಅಪಘಾತ – ತಂದೆ, ಮಗಳು ಸಾವು

Public TV
1 Min Read

ತುಮಕೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ತಂದೆ (Father), ಮಗಳು ಮೃತಪಟ್ಟಿರುವ ಧಾರುಣ ಘಟನೆ ತುಮಕೂರು (Tumkur) ಜಿಲ್ಲೆಯ ಕುಣಿಗಲ್ ತಾಲೂಕಿನ ಗಡಿ ಭಾಗದ ಬನ್ನಿಮರದಕಟ್ಟೆ ಸಮೀಪ ನಡೆದಿದೆ.

ಮೃತರನ್ನು ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿ ನಟ್ಟಿಗೆರೆ ಗ್ರಾಮದ ನಿವಾಸಿ ತಿರುಮಲೇಗೌಡ (50), ಆತನ ಮಗಳು ಚಂದನಾ (20) ಎಂದು ಗುರುತಿಸಲಾಗಿದೆ. ತಿರುಮಲೇಗೌಡ ತನ್ನ ಸ್ವಗ್ರಾಮ ನಟ್ಟಿಗೆರೆ ಗ್ರಾಮಕ್ಕೆ ಹಬ್ಬಕ್ಕೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ (Bengaluru) ಸುಂಕದಕಟ್ಟೆಗೆ ತನ್ನ ಮಗಳೊಂದಿಗೆ ತೆರಳುತ್ತಿದ್ದಾಗ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ತಿರುಮಲೇಗೌಡ ಸ್ಥಳದಲ್ಲೇ‌ ಮೃತಪಟ್ಟರು. ಇದನ್ನೂ ಓದಿ: ಗಾಂಧೀಜಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಬಸವರಾಜ ಬೊಮ್ಮಾಯಿ

ಆದರೆ ಆತನ ಮಗಳು ಚಂದನಾ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದರು. ಈ ಹಿನ್ನೆಲೆಯಲ್ಲಿ ಆಕೆಯನ್ನು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಚಂದನಾ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಬ್ಬೂರು ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Bharat Jodo Yatra: ಪ್ರಿಯಾಂಕಾ ಜತೆ ರಾಹುಲ್ ಗಾಂಧಿ ಸ್ನೋಬಾಲ್ ಫೈಟ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *