ದೂರ ದೃಷ್ಟಿಯ ಜನಸ್ನೇಹಿ ಬಜೆಟ್: ಎಂಟಿಬಿ ನಾಗರಾಜು

Public TV
1 Min Read

ಬೆಂಗಳೂರು: ಈ ಸಾಲಿನ ಕೇಂದ್ರ ಬಜೆಟ್ (Union Budjet 2023) ನಲ್ಲಿ ರಾಜ್ಯದ ಬಯಲು ಸೀಮೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ 5,300 ಕೋಟಿ ಅನುದಾನ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು (MTB Nagaraju) ಧನ್ಯವಾದ ತಿಳಿಸಿದ್ದಾರೆ.

ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಕೃಷಿ ಜಮೀನಿಗೆ ನೀರು ಒದಗಿಸುವ ಹಾಗೂ ಕುಡಿಯುವ ನೀರು ಪೂರೈಸುವ ಭದ್ರ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರದ ಈ ನೆರವಿನಿಂದ ಆದಷ್ಟು ಬೇಗ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ಅನುದಾನ ಒದಗಿಸಿರುವುದು ದೂರದೃಷ್ಟಿಯ ಕ್ರಮ ಎಂದು ಅವರು ಬಣ್ಣಿಸಿದ್ದಾರೆ. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *