ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ – ಚುನಾವಣೆ ಮುನ್ನವೇ ಸೋಲಿನ ಭೀತಿ?

Public TV
2 Min Read

ತುಮಕೂರು: ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಪ್ರಬಲ ಆಕಾಂಕ್ಷಿಯಾದ (Ticket Aspirant) ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ (Rafiq Ahmed) ಸೋಲಿನ ಭೀತಿ ಮತ್ತೆ ಕಾಡ್ತಾ ಇದ್ಯಾ? ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಗುಮಾನಿ ಹುಟ್ಟಿಕೊಂಡಿದೆ.

ಕಾಂಗ್ರೆಸ್‍ನ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು (Attica Babu) ಮಾತು ಈ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಕೆಲದಿನಗಳ ಹಿಂದೆ ಮಸೀದಿಗಳಿಗೆ ಭೇಟಿ ಕೊಟ್ಟು ಆಡಿದ ಮಾತುಗಳು ರಫಿಕ್ ಅಹ್ಮದ್ ಸ್ಪರ್ಧೆ ಮಾಡಲ್ಲ ಎನ್ನುವುದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ. ರಫಿಕ್ ಅಹ್ಮದ್ ನನಗೆ ಸಹಾಯ ಮಾಡುತ್ತಾರೆ. ಅವರ ಬಳಿ ಹಣ ಇಲ್ಲ. ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅಟ್ಟಿಕಾ ಬಾಬು ಮಸೀದಿಯಲ್ಲಿ ಹೇಳಿದ್ದಾರೆ. ಅಟ್ಟಿಕಾ ಬಾಬು ಕೂಡ ಮುಸ್ಲಿಂ ಸಮುದಾಯದವನಾಗಿದ್ದು, ನನ್ನ ಹೆಸರು ಅಯೂಬ್ ನನ್ನ ತಂದೆ ಪಾಷ ಸಾಬ್ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

ಹಾಲಿ ಶಾಸಕರಾಗಿದ್ದರೂ ಕಳೆದ ಬಾರಿ ರಫಿಕ್ ಅಹ್ಮದ್ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ತುಮಕೂರು ನಗರದಲ್ಲಿ ಮುಸ್ಲಿಂ ಸಮುದಾಯದ ಮತ ಹೆಚ್ಚಿದ್ದರೂ ಕಾಂಗ್ರೆಸ್‍ನಿಂದ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಕಷ್ಟವಾಗುತ್ತದೆ ಎಂಬ ಲೆಕ್ಕಾಚಾರ ಇದೆ. ಕಾಂಗ್ರೆಸ್‍ನಿಂದ ಹಿಂದೂ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಸುಲಭ ಎಂಬ ಸ್ಟ್ರಾಟಜಿಯನ್ನು ನಾಯಕರು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ ಸೋಲಿನ ಭೀತಿ ಕಾಡ್ತಾ ಇದ್ದು, ಚುನಾವಣೆಗೆ ಖರ್ಚು ಮಾಡಲು ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ಮಾತು ಆಪ್ತ ಮೂಲಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ತಮ್ಮ ಸಮುದಾಯದವರೇ ಆದ ಅಟ್ಟಿಕಾ ಗೋಲ್ಡ್ ಕಂಪನಿಯ ಅಟ್ಟಿಕಾ ಬಾಬು ಅವರ ಬೆಂಬಲಕ್ಕೆ ರಫಿಕ್ ಅಹ್ಮದ್ ನಿಂತಿದ್ದಾರೆ ಎನ್ನುವ ಸಂಗತಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಿಂದ 22ನೇ ಸ್ಥಾನಕ್ಕೆ ಜಾರಿದ ಅದಾನಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *