ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಪ್ರಾಂಶುಪಾಲನ ವಿರುದ್ಧ ರೇಪ್ ಕೇಸ್

Public TV
1 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದ ವಿಸಿಬಿ ಶಿಕ್ಷಣ ಸಂಸ್ಥೆ (VCB Educational Institute) ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೇಸ್‌ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.

ವಿದ್ಯಾರ್ಥಿನಿ (Student) ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಪ್ರಾಂಶುಪಾಲನ ವಿರುದ್ಧವೇ ಅತ್ಯಾಚಾರ ಹಾಗೂ ಕೊಲೆ ಪ್ರಕರಣ (FIR) ದಾಖಲಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ದಂಡಕ್ಕೆ ಶೇ.50 ಡಿಸ್ಕೌಂಟ್‌ – ಯಾವುದಕ್ಕೆ ಎಷ್ಟು?

ಲಿಂಗಸುಗೂರಿನ ಸರ್ ಎಂ.ವಿಶ್ವೇಶ್ವರಯ್ಯ ಪಿಯು ಕಾಲೇಜಿನಲ್ಲಿ (Vishweshwaraih PU College) ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿ ಸಾವಿಗೆ ಪ್ರಾಂಶುಪಾಲ ರಮೇಶ್ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‍ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ

ರಮೇಶ್ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅಂದು ಸಹ ವಿದ್ಯಾರ್ಥಿನಿಯನ್ನ ತನ್ನ ಕೋಣೆಗೆ ಕರೆಯಿಸಿಕೊಂಡು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ನಂತರ ಅನುಮಾನ ಬಾರದಂತೆ ವಸತಿ ನಿಲಯದಲ್ಲಿ ಫ್ಯಾನ್‌ಗೆ ನೇಣು ಹಾಕಿದ್ದಾನೆ ಎಂದು ವಿದ್ಯಾರ್ಥಿನಿ ಪೋಷಕರು ಲಿಂಗಸುಗೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಷಕರ ದೂರಿನ ಮೇರೆಗೆ ಪೊಲೀಸರು ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *