ರೇವಣ್ಣ ಹೊಳೆನರಸೀಪುರದ ಮಹಾರಾಜ – ಶಾಸಕ ಪುಟ್ಟರಾಜು

Public TV
1 Min Read

ಮಂಡ್ಯ: ಹೆಚ್.ಡಿ.ರೇವಣ್ಣ (H.D.Revanna) ಹೊಳೆನರಸೀಪುರದ ಮಹಾರಾಜ. ಅವರು ಕೆ.ಆರ್.ಪೇಟೆ (K.R. Pet) ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ರೇವಣ್ಣ ಹೊಳೆನರಸೀಪುರದಲ್ಲೇ (Holenarasipura) ಸ್ಪರ್ಧೆ ಮಾಡುತ್ತಾರೆ ಎಂದು ಶಾಸಕ ಪುಟ್ಟರಾಜು (C.S.Puttaraju) ಹೇಳಿದ್ದಾರೆ.

ಮಂಡ್ಯ (Mandya) ಜಿಲ್ಲೆಯ ಪಾಂಡವಪುರದಲ್ಲಿ ಮಾತನಾಡಿದ ಶಾಸಕ ಸಿ.ಎಸ್.ಪುಟ್ಟರಾಜು, ಹೆಚ್.ಡಿ.ರೇವಣ್ಣ ಕೆ.ಆರ್.ಪೇಟೆಗೆ ಬರುವ ಪ್ರಶ್ನೆನೇ ಇಲ್ಲ. ಅವರು ಹೊಳೆನರಸೀಪುರದ ಮಹಾರಾಜ. ಅಲ್ಲಿಯೇ ನಿಂತು ಹೆಚ್ಚು ಲೀಡ್‌ನಲ್ಲಿ ಗೆಲ್ಲುತ್ತಾರೆ. ಭವಾನಿ ರೇವಣ್ಣ ಅವರು ಹಾಸನಕ್ಕೆ ಆಕಾಂಕ್ಷಿತರಾಗಿದ್ದಾರೆ. ದೇವೇಗೌಡರ ಮಾರ್ಗದರ್ಶನದಲ್ಲಿ ಕುಮಾರಣ್ಣ, ರೇವಣ್ಣ ಅವರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣದ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಇಬ್ಬರು ಮಕ್ಕಳು ರಾಜಕಾರಣದಲ್ಲಿ ಇಲ್ವಾ? ಯಡಿಯೂರಪ್ಪ ಅವರ ಮಗನಿಗೆ ಸೀಟ್‌ಗಾಗಿ ಹುನ್ನಾರ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಮಗನಿಗೆ ಸೀಟ್ ಕೊಟ್ವಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಯಾವ ಪಾರ್ಟಿಯಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ? ದೇವೇಗೌಡರ ನೇತೃತ್ವದಲ್ಲಿ ಅವರ ಕುಟುಂಬದ ಸದಸ್ಯರು ರಾಜ್ಯದಲ್ಲಿ ಕೆಲಸ ಮಾಡಿದ್ದಕ್ಕೆ ಪ್ರಾದೇಶಿಕ ಪಕ್ಷ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Cyber Crimeː 1 ತಿಂಗಳಲ್ಲಿ 1,228 ಕೇಸ್ – ಪರಿಹರಿಸಲು ಪೊಲೀಸ್ ಸಿಬ್ಬಂದಿ ಕೊರತೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *