ಬಜೆಟ್: ಸಮಸ್ತ ಕರ್ನಾಟಕ ಜನತೆ ಹೆಸರಲ್ಲಿ ಅರ್ಚನೆ ಮಾಡಿಸಿದ ಸಿಎಂ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಶುಕ್ರವಾರ) ತಮ್ಮ ಎರಡನೇ ಬಜೆಟ್‌ (Karnataka Budget 2023) ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆ ಹೊತ್ತಲ್ಲೇ ಮಂಡಿಸಲಾಗುತ್ತಿರುವ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್‌ ಇದಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಎಸ್ ಎನ್.ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ಸಿಎಂ ವಿಧಾನಸೌಧಕ್ಕೆ ತೆರಳುವ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?

ಶ್ರೀಕಂಠೇಶ್ವರ ಮತ್ತು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಸಿಎಂ ಅರ್ಚನೆ ಮಾಡಿಸಿದರು. ನಂತರ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು.

ಸಿಎಂ ಬೊಮ್ಮಾಯಿ ಜೊತೆ ಸಚಿವರು ವಿಧಾನಸೌಧಕ್ಕೆ ಆಗಮಿಸಿದರು. ಬಜೆಟ್‌ ಮಂಡಿಸಲಿರುವ ಬೊಮ್ಮಾಯಿ ಅವರಿಗೆ ಸಚಿವರು ಶುಭಾಶಯ ತಿಳಿಸಿದರು. ಇದನ್ನೂ ಓದಿ: ಸಿದ್ದು ತವರಲ್ಲಿ ಆಪರೇಷನ್ ಕಾಂಗ್ರೆಸ್- ಜೆಡಿಎಸ್, ಬಿಜೆಪಿ ಮುಖಂಡರ ನಿದ್ದೆಗೆಡಿಸಿದ ಡಿಕೆಶಿ ತಂತ್ರ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *