40 ಲಕ್ಷ ಲಂಚ ಅಲ್ಲ ಸಿಕ್ಕಿದ್ದು 1.62 ಕೋಟಿ – ಬಿಜೆಪಿ ಶಾಸಕನ ಪುತ್ರನ ಜೊತೆ ಐವರು ಅರೆಸ್ಟ್

Public TV
2 Min Read

ಬೆಂಗಳೂರು: ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (BJP MLA Madal Virupakshappa) ಪುತ್ರ ಪ್ರಶಾಂತ್ ಮಾಡಾಳ್ (Prashanth Madal) ಲೋಕಾಯುಕ್ತ (Lokayuktha) ಬಲೆಗೆ ಬಿದ್ದಿದ್ದಾರೆ. ಪ್ರಶಾಂತ್ ಸೇರಿದಂತೆ ಐವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಲೋಕಾಯುಕ್ತ ಡಿಐಜಿ ಸುಬ್ರಮಣ್ಯ ರಾವ್, ಚೆನ್ನಗಿರಿ ಶಾಸಕ ಮಾಡಾಳ್ ವಿರೋಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ಮೇಲೆ ಎಫ್‌ಐಆರ್ ದಾಖಲಿಸಿಕೊಂಡು ದಾಳಿ ಮಾಡಲಾಗಿದೆ. ಜಲಮಂಡಳಿ ಹಾಗೂ ಎಸಿಬಿ ಎರಡಲ್ಲೂ ಅಕೌಂಟೆಂಟ್ ಆಗಿ ಪ್ರಶಾಂತ್‌ ಕಾರ್ಯನಿರ್ವಹಿಸುತ್ತಿದ್ದರು. ಕಚ್ಚಾ ಸಾಮಾಗ್ರಿ ಕಂಪನಿಯನ್ನು ನಡೆಸುತ್ತಿದ್ದ ಶ್ರೇಯಸ್ ಕಶ್ಯಪ್ ದೂರುದಾರರಾಗಿದ್ದು, ಬುಧವಾರ ಪ್ರಶಾಂತ್ ಹಣಕ್ಕೆ ಡಿಮಾಂಡ್ ಮಾಡಿದ್ದರ ಬಗ್ಗೆ ದೂರು ನೀಡಿದ್ದರು ಎಂದು ತಿಳಿಸಿದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಗುರುವಾರ ಪ್ರಶಾಂತ್ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅವರಿಗೆ ಲಂಚ ನೀಡಲು ಮುಂದಾಗಿದ್ದ ಇನ್ನೂ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: 40 ಲಕ್ಷ ಲಂಚ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ

ಪ್ರಶಾಂತ್ 40 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರೂ ದಾಳಿ ವೇಳೆ ಒಟ್ಟು 1.62 ಕೋಟಿ ರೂ. ಸಿಕ್ಕಿದೆ. ಸದ್ಯ ಪ್ರಶಾಂತ್ ಕಚೇರಿಯಲ್ಲಿ ಸಿಕ್ಕಿರುವ ಹಣದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇನ್ನೂ ಹಲವು ಸ್ಥಳಗಳಲ್ಲಿ ದಾಳಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆರೋಪ ಏನು?
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 80 ಲಕ್ಷ‌ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪ್ರಶಾಂತ್‌ ಮಾಡಲ್‌ ಇದ್ದ ಖಾಸಗಿ ಕಚೇರಿ ಮೇಲೆ  ಪೊಲೀಸರು ದಾಳಿ ನಡೆಸಿದ್ದರು. ಮುಂದುವರಿದ ಭಾಗವಾಗಿ ಡಾಲರ್ಸ್‌ ಕಾಲೋನಿ ನಿವಾಸದಲ್ಲೂ ಲೋಕಾ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಮಾಡಾಳ್‌ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಉಪಚುನಾವಣೆ – ಮೂರು ಕಡೆ ಗೆದ್ದ ಕಾಂಗ್ರೆಸ್, ಬಿಜೆಪಿಗೆ ಮುಖಭಂಗ

Share This Article
Leave a Comment

Leave a Reply

Your email address will not be published. Required fields are marked *