ಒಳ ಮೀಸಲಾತಿಗೆ ವಿರೋಧ ಬಂಜಾರ ಸ್ವಾಮೀಜಿ ಆತ್ಮಹತ್ಯೆ ಯತ್ನ

Public TV
1 Min Read

ಹಾವೇರಿ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿ (Reservation) ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕ್ಷೇತ್ರದಲ್ಲಿ ಬಂಜಾರ (Banjara) ಸಮುದಾಯದ ಪ್ರತಿಭಟನೆ ವೇಳೆ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಸರ್ಕಾರದ ನಡೆಯನ್ನು ಖಂಡಿಸಿ ತಹಶೀಲ್ದಾರ್  ಕಚೇರಿ (AC office) ಬಳಿ ಬಂಜಾರ ಸಮುದಾಯದ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಅವರನ್ನು ರಕ್ಷಿಸಿದ್ದಾರೆ. ಸ್ವಾಮೀಜಿಯವರನ್ನು ಗುಂಡೂರು (Gunduru) ಗ್ರಾಮದ ತಿಪ್ಪೆಸ್ವಾಮಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 47 ಜನ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಪ್ರಯಾಣಿಕರು ಬಚಾವ್

ಶಿಗ್ಗಾಂವ್ ತಾಲೂಕು ಆಸ್ಪತ್ರೆಯಲ್ಲಿ ಸ್ವಾಮಿಜಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಮಂಡ್ಯ ಬಿಟ್ಟು ಬೇರೆ ಯಾವ ಜಿಲ್ಲೆ ಜನರಿಗೂ ಹೆಚ್‌ಡಿಕೆ ಭರವಸೆ ಮೇಲೆ ನಂಬಿಕೆಯಿಲ್ಲ – ಚಲುವರಾಯಸ್ವಾಮಿ

Share This Article