ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ಕೊಡ್ತೀನಿ ಅಂದ್ರೂ ಓಕೆ – ರೇವಣ್ಣ

Public TV
1 Min Read

ಹಾಸನ: ದೇವೇಗೌಡರು (HD Devegowda) ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ಕೊಡ್ತೀನಿ ಅಂದ್ರೂ ಓಕೆ ಅಂತೀನಿ ಎಂದು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಹೇಳಿದ್ದಾರೆ.

ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಾನು ಈಗಾಗಲೇ ದೇವೇಗೌಡರ ಬಳಿ ಹೇಳಿದ್ದೇನೆ. ಅದು ನಮ್ಮಿಬ್ಬರಿಗೇ ಗೊತ್ತು. ದೇವೇಗೌಡರೇ ನಮಗೆ ಸುಪ್ರೀಂ ನಾಯಕರು. ಅವರು ಏನು ಹೇಳುತ್ತಾರೋ ಅದಕ್ಕೆ ನಾನು ಬದ್ಧ ದೇವೇಗೌಡರು ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಅಂತಾ ಹೇಳಿದ್ರೂ ನಾನು ಓಕೆ ಅಂತೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ – ಪುಟಿನ್‌ ಆರೋಗ್ಯದಲ್ಲಿ ಬಿಗ್‌ ಅಪ್ಡೇಟ್ಸ್‌

ಕಾಂಗ್ರೆಸ್ (Congress) ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ (Siddaramaiah) ಮತ್ತು ನನ್ನ ನಡುವಿನ ಬಾಂಧವ್ಯ ಬೇರೆ. ದೇವೇಗೌಡರು, ಕುಮಾರಣ್ಣ ಇಲ್ವಾ? ನಾನೇಕೆ ಕಾಂಗ್ರೆಸ್‌ಗೆ ಹೊಗಲಿ? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ, ನಾನು ಕುಮಾರಣ್ಣ ಮೊದಲೇ ಮಾತನಾಡಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಜನ ಬಲಿ

ಹಾಸನದಲ್ಲಿ ಶಕುನಿಗಳು ತಲೆಕೆಡಿಸುತ್ತಿದ್ದಾರೆ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ. ಯಾರೂ ನನ್ನ-ಕುಮಾರಣ್ಣನನ್ನ ಹೊಡೆದಾಡಿಸಲು ಸಾಧ್ಯವಿಲ್ಲ. ಬೆಳಗಾವುದರೊಳಗೆ ಒಂದಾಗ್ತೀವಿ ಎಂದಿದ್ದಾರೆ.

Share This Article