ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತ ಮತ್ತೊಬ್ಬ ಸಿಎಂ ಇಲ್ಲ: ಹೆಚ್.ಡಿ.ದೇವೇಗೌಡ

Public TV
1 Min Read

ರಾಮನಗರ: ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತಹ (HD Kumaraswamy) ಮತ್ತೊಬ್ಬ ಮುಖ್ಯಮಂತ್ರಿಯಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD Devegowda) ತಿಳಿಸಿದರು.

ಚನ್ನಪಟ್ಟಣದ ಶೇರು ಸರ್ಕಲ್ ಬಳಿ ಬಹಿರಂಗ ಸಭೆ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಕಳೆದೆರಡು ದಿನಗಳಲ್ಲಿ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ‌ ಕೊಡುತ್ತೇನೆ ಎಂದು ಹೇಳುವ ವ್ಯಕ್ತಿ ಇದ್ರೆ ಅದು ಕುಮಾರಸ್ವಾಮಿ. ನುಡಿದಂತೆ ನಡೆಯುವ ರಾಜಕಾರಣಿ ಯಾವನಾದ್ರು ಇದ್ದರೇ ಅವರೇ ಕುಮಾರಸ್ವಾಮಿಯಾಗಿದ್ದಾರೆ. ಕಾಂಗ್ರೆಸ್‌ನವರ (Congress) ವ್ಯಂಗ್ಯದ ನಡುವೆ ಸಾಲ‌ ಮನ್ನಾ ಮಾಡಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಎರಡನೇ ಸಾಲಿನಲ್ಲಿ ಕುಳಿತ ಸಿದ್ದರಾಮಯ್ಯ ವ್ಯಂಗ್ಯ ಮಾಡಿ ಹೊರಗೆ ಹೋಗುತ್ತಾರೆ ಎಂದು ಹೇಳಿದರು.

ಹಿಂದೂಸ್ತಾನದಲ್ಲಿ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳಿಗೆ ಹಣ ಕೊಟ್ಟು ಸಾಲ ಮನ್ನಾ ಮಾಡಿದ್ರೆ ಕುಮಾರಸ್ವಾಮಿ. ಸಿದ್ದರಾಮಯ್ಯ 50 ಸಾವಿರ ಸಾಲ‌ ಮನ್ನಾ ಮಾಡಿದ್ದರೂ 3,500 ಕೋಟಿ ರೂ. ಬಾಕಿ ಉಳಿದಿತ್ತು. ಅದರ ಜೊತೆಗೆ 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದು ಹೆಚ್‌ಡಿಕೆ. ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತ ಮತ್ತೊಬ್ಬ ಸಿಎಂ ಇಲ್ಲ. ಕಾಂಗ್ರೆಸ್ (Congress) ಬಿಜೆಪಿಯವ್ರು (BJP) ನನ್ನ ಮುಂದೆ ನಿಂತು ಹೇಳಲಿ, ‌ಇದು ನನ್ನ ಸವಾಲು. ಮಂಡ್ಯದಿಂದ ಸ್ಪರ್ಧೆಗೆ ಒತ್ತಡ ಬಂದ್ರೂ ಚನ್ನಪಟ್ಟಣ ನನ್ನ ಕರ್ಮ ಭೂಮಿ ಅಂತ ನಿರಾಕರಿಸಿದರು.

ಚನ್ನಪಟ್ಟಣದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ರೂ ಒಂದೇ ತಾಯಿ ಮಕ್ಕಳಂತೆ ಕೆಲಸ ಮಾಡಿ. ಸಮೀಕ್ಷಾ ವರದಿಗಳ ಬಗ್ಗೆ ತಲೆ‌ಕೆಡಿಸಿಕೊಳ್ಳಬೇಡಿ. ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ. ಮುಖ್ಯಮಂತ್ರಿ ಕೊಡುವ ಹೆಗ್ಗಳಿಕೆ ಚನ್ನಪಟ್ಟಣಕ್ಕೆ ಸಲ್ಲಬೇಕು. ಯುವಕರು ದೇಶದ ಮುಂದಿನ ಪ್ರಜೆಗಳು ಈ ಪಕ್ಷವನ್ನ ಉಳಿಸಿ. ನಾವು ತಾಯಿ ಭುವನೇಶ್ವರಿ ಮಕ್ಕಳು ನಾಡಿಗಾಗಿ ತಮ್ಮ ಶಕ್ತಿ ತೋರಿಸಿ ಎಂದ ಹೆಚ್‌ಡಿಡಿ, ಕುಮಾರಸ್ವಾಮಿ ಇಡೀ ರಾಜ್ಯ ಸುತ್ತಬೇಕು ಅವರು ಬರಲು ಸಾಧ್ಯವಿಲ್ಲ ಎಂದರು. ದ್ವಿಚಕ್ರ ವಾಹನ ಸವಾರನಿಗೆ ಸೀಟ್ ಬೆಲ್ಟ್ ಹಾಕಿಲ್ಲ ಅಂತ ದಂಡ!

Share This Article