ಗೆದ್ದು ಬೀಗಿದ ಕಾಂಗ್ರೆಸ್ ಗೆ ವಿಶ್ ಮಾಡಿದ ಪಿಎಂ ನರೇಂದ್ರ ಮೋದಿ

Public TV
1 Min Read

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿರುವ ಕಾಂಗ್ರೆಸ್ (Congress) ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ.

ಚುನಾವಣೆ ಗೆಲುವಿನ ಕುರಿತಾಗಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ (Assembly Election 2023) ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು ಬರೆದಿದ್ದಾರೆ. ಆದರೆ, ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಒಂದಕ್ಷರ ಕೂಡ ಬರೆಯದೇ ಇರುವುದು ಅಚ್ಚರಿ ತಂದಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates

ಈಗಾಗಲೇ ಬಿಜೆಪಿ ನಾಯಕರು ಮತ್ತು ಸ್ವತಃ ರಾಜ್ಯದ ಬಿಜೆಪಿ ಅಧ್ಯಕ್ಷರು ಸೋಲಿನ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಸೋಲಿನ ಬಗ್ಗೆ ವಿಮರ್ಶೆ ಮಾಡಿಕೊಂಡು, ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಆಗುವುದಾಗಿ ಮಾತನಾಡಿದ್ದಾರೆ. ಅಲ್ಲದೇ, ಜನರ ಆದೇಶವನ್ನು ಒಪ್ಪಿಕೊಳ್ಳುವುದಾಗಿ ತಿಳಿಸಿದ್ದಾರೆ.

Share This Article