ಎನ್‌ ರವಿ Vs ತಮಿಳುನಾಡು ಸರ್ಕಾರ – ಕ್ಯಾಬಿನೆಟ್‌ನಿಂದಲೇ ಸೆಂಥಿಲ್ ಬಾಲಾಜಿ ಔಟ್‌

Public TV
1 Min Read

ಚೆನ್ನೈ: ಬಹಳ ಅಪರೂಪದ ಎಂಬಂತೆ ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ (Tamil Nadu Governor RN Ravi) ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (Stalin) ಅವರನ್ನು ಸಂಪರ್ಕಿಸದೇ ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.

ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಚಿವ ವಿ ಸೆಂಥಿಲ್ ಬಾಲಾಜಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ತಮಿಳುನಾಡು ರಾಜಭವನದ ಪ್ರಕಟಣೆ ತಿಳಿಸಿದೆ.  ಇದನ್ನೂ ಓದಿ: ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿದ್ಯುತ್, ಅಬಕಾರಿ ಖಾತೆಯನ್ನು ಹೊಂದಿದ್ದ ಸೆಂಥಿಲ್‌ ಬಾಲಾಜಿ ಅವರನ್ನು ಬಂಧಿಸಿತ್ತು. ಬಂಧಿಸಿದ ಬಳಿಕ ಸ್ಟಾಲಿನ್‌ ಅವರು ಯಾವುದೇ ಖಾತೆಯನ್ನು ನೀಡದೇ ಸಂಪುಟದಲ್ಲಿ ಉಳಿಸಿದ್ದರು.

ಯಾವುದೇ ಖಾತೆಯನ್ನು ನೀಡದೇ ಸಂಪುಟದಲ್ಲಿ ಉಳಿಸಿಕೊಂಡಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಈಗ ಸ್ಟಾಲಿನ್‌ ಅವರನ್ನು ಸಂಪರ್ಕಿಸದೇ ವಜಾಗೊಳಿಸಿದ್ದು ತಮಿಳುನಾಡಿನಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ತಿಕ್ಕಾಟ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆಯಿದೆ.

 

ರಾಜ್ಯಪಾಲ ರವಿ ನಿರ್ಧಾರ ಪ್ರಶ್ನಿಸಿ ಡಿಎಂಕೆ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಸಾಧ್ಯತೆಯಿದೆ. ಎಐಎಡಿಎಂಕೆ ನಾಯಕರಾಗಿದ್ದ ಸೆಂಥಿಲ್‌ ಬಾಲಾಜಿ ಜಯಲಲಿತಾ ಆಪ್ತರಾಗಿದ್ದರು. ಜಯಲಲಿತಾ ನಿಧನದ ಬಳಿಕ ಪಕ್ಷ ತೊರೆದು ಡಿಎಂಕೆ ಸೇರಿದ್ದರು. ಎಐಎಡಿಎಂಕೆಯಲ್ಲಿದ್ದಾಗ ಸ್ಟಾಲಿನ್‌ ಅವರೇ ಸೆಂಥಿಲ್‌ ಬಾಲಾಜಿ ಬಹಳ ಭ್ರಷ್ಟಾಚಾರ ಎಸಗಿದ್ದಾರೆ. ಅವರು ಜೈಲಿನಲ್ಲಿ ಇರಬೇಕು ಎಂದು ಚುನಾವಣಾ ಪ್ರಚಾರದ ಸಮಯದಲ್ಲಿ ವಾಗ್ದಾಳಿ ನಡೆಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್