ಪ್ರೀತಿಸುವಂತೆ ಪೀಡಿಸ್ತಿದ್ದ ಯುವಕ – ಬೇಸತ್ತು ಯುವತಿ ಆತ್ಮಹತ್ಯೆ

Public TV
1 Min Read

ಮೈಸೂರು: ಪ್ರೀತಿಸುವಂತೆ (Love) ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ (Ilavala Police Station) ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.

ಯುವತಿ ಹರ್ಷಿತಾ (21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಹರ್ಷಿತಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್‌ಗೆ ಸೇರಿಕೊಂಡಿದ್ದಳು. ಹರ್ಷಿತಾಳನ್ನು ಲವ್ ಮಾಡುತ್ತಿದ್ದ ಶಿವು ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಶಿವು ಮನವಿಯನ್ನು ಹರ್ಷಿತಾ ತಿರಸ್ಕರಿಸುತ್ತಿದ್ದಳು. ಇದನ್ನೂ ಓದಿ: Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

ಈ ಮಧ್ಯೆ ಮನೆಯವರು ಹರ್ಷಿತಾಗೆ ಮದುವೆ (Marriage) ನಿಶ್ಚಯ ಮಾಡಿ ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು. ಈ ವಿಷಯ ತಿಳಿದ ನಂತರ ತನ್ನನ್ನು ಮದುವೆಯಾಗುವಂತೆ ಇನ್ನಷ್ಟು ಕಿರುಕುಳ ನೀಡಲು ಪ್ರಾರಂಭಿಸಿದ್ದ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳನ್ನ ಸ್ವಚ್ಛಗೊಳಿಸಲು ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕೂಡಲೇ ಹರ್ಷಿತಾಳನ್ನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಹರ್ಷಿತಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಶಿವುಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್