ಕುಮಟಾದಲ್ಲಿ ಅಬ್ಬರದ ಮಳೆ 30 ಮರಗಳು ಧರೆಗೆ

By
1 Min Read

– ಗೋಕರ್ಣ ದೇವಾಲಯದ ಭೋಜನ ಶಾಲೆಯ ಮೇಲೂ ಉರುಳಿದ ಮರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ (Kumta) ಬಾರೀ ಗಾಳಿ ಮಳೆಗೆ (Rain )30 ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಮಾಸ್ತಿಕಟ್ಟೆ ಬಳಿ ಗೂಡಂಗಡಿಗೆ ಮರ ಬಿದ್ದು ಓರ್ವನಿಗೆ ಗಂಭೀರ ಗಾಯವಾಗಿದ್ದು ಎರಡು ಬೈಕ್‍ಗಳು ಜಖಂಗೊಂಡಿವೆ.

ಕುಮಟಾದ ನಾಲ್ಕು ಮನೆಗಳು, ಶಾಲೆಯ ಕೋಣೆಯೊಂದು ಮರ ಬಿದ್ದ ಪರಿಣಾಮ ಸಂಪೂರ್ಣ ಜಕಂ ಆಗಿದೆ.

ಗೋಕರ್ಣದ (Gokarna) ಮಹಾಬಲೇಶ್ವರ ದೇವಸ್ಥಾನದ ಅಮೃತಾನ್ನ ಭೋಜನ ಶಾಲೆಯ ಮೇಲೆ ಮರ ಉರುಳಿ ಹಾನಿಯಾಗಿದೆ. ಅಲ್ಲದೇ ಕುಮಟಾದಲ್ಲಿ ಅಘನಾಶಿನಿ ನದಿ ನೀರಿನ ಪ್ರವಾಹದಿಂದ ಹಂದಿಗೋಣ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಕೆಲವರನ್ನು ಹಂದಿಗೋಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ಕುಮಟಾದಲ್ಲಿ ಸಂಜೆಯಿಂದ ಅಬ್ಬರದ ಮಳೆ ಗಾಳಿಗೆ ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿಗಳು ಹಾನಿಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್