ಪ್ರತಿಕೂಲ ಹವಾಮಾನ- ತಾತ್ಕಾಲಿಕವಾಗಿ ಅಮರನಾಥ ಯಾತ್ರೆ ರದ್ದು

By
1 Min Read

ನವದೆಹಲಿ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು (Amarnath Yatra-2023) ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir Weather) ಹವಾಮಾನ ವೈಪರೀತ್ಯದಿಂದ ನಿರಂತರವಾಗಿ ಹಿಮ ಮತ್ತು ಮಳೆ ಬೀಳುತ್ತಿದೆ. ಹೀಗಾಗಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಯಾತ್ರೆಗೆ ಅನುಕೂಲಕರ ವಾತಾವರಣವಿಲ್ಲದ ಕಾರಣ ಅಧಿಕಾರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ.

62 ದಿನಗಳ ಪವಿತ್ರ ಅಮರನಾಥ ಯಾತ್ರೆ ಜುಲೈ 1 ರಿಂದ ಆರಂಭವಾಗಿದೆ. ಮೊದಲ ಬ್ಯಾಚ್‍ನಲ್ಲಿ 7 ರಿಂದ 8 ಸಾವಿರ ಮಂದಿ ಯಾತ್ರಾರ್ಥಿಗಳಿದ್ದಾರೆ. ಬೇಸ್ ಕ್ಯಾಂಪ್‍ನಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಪವಿತ್ರ ಅಮರನಾಥ ಗುಹೆಯ ದೇಗುಲಕ್ಕೆ 12 ಕಿಮೀ ಪ್ರಯಾಣವನ್ನು ಕೈಗೊಂಡಿದ್ದಾರೆ. 62 ದಿನಗಳ ಯಾತ್ರೆಯು ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ಶಿಕ್ಷಣ ಸಚಿವರ ತವರಿನಲ್ಲಿ ಛತ್ರಿ ಹಿಡಿದು ಪಾಠ ಕೇಳುತ್ತಿದ್ದಾರೆ ಮಕ್ಕಳು!

ಹಿಮಾಲಯದ ಎತ್ತರದ ಗುಹೆಯಲ್ಲಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಶಿವಲಿಂಗದ ದರ್ಶನ ಪಡೆಯಲು ಲಕ್ಷಾಂತರ ಯಾತ್ರಿಕರು ಹೊರಟಿದ್ದಾರೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್