ಭೀಮನ ಅಮವಾಸ್ಯೆಯ ದಿನವೇ ಪತಿಯಿಂದ ಪತ್ನಿ ಕಿಡ್ನಾಪ್

Public TV
1 Min Read

ಶಿವಮೊಗ್ಗ: ಭೀಮನ ಅಮವಾಸ್ಯೆಯ ದಿನವೇ ಪತಿಯೇ ಪತ್ನಿಯನ್ನು (Wife Kidnapped By Husband) ಅಪಹರಿಸಿರುವ ಘಟನೆ ಶಿವಮೊಗ್ಗದ (Shivamogga) ಬಸ್ ನಿಲ್ದಾಣದ ಬಳಿ ನಡೆದಿದೆ.

ಅಪಹರಣವಾದ ಗೃಹಿಣಿಯನ್ನು ದಿವ್ಯ (23) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಗಾಜನೂರಿನ ರವಿ ಹಾಗೂ ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ದಿವ್ಯ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರ ವಿರೋಧ ಇತ್ತು. ವಿರೋಧದ ನಡುವೆಯೂ ಇಬ್ಬರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಿ ಮದುವೆಯಾಗಿದ್ದರು. ಆದರೆ ಕಳೆದ ಕೆಲವು ದಿನಗಳ ಹಿಂದೆ ದಿವ್ಯಾಳನ್ನು ಆಕೆಯ ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದರು.

ಇಂದು ಬಸ್ ನಿಲ್ದಾಣದ ಬಳಿ ಯುವತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಆಕೆಯ ಪತಿ ರವಿ ಹಾಗೂ ಆತನ ಸ್ನೇಹಿತರು ದಿವ್ಯಾಳನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಅಪಹರಣದ ನಂತರ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ. ನಮ್ಮ ಮಗಳನ್ನು ಗಾಜನೂರಿನ ರವಿಯೇ ಅಪಹರಿಸಿಕೊಂಡು ಹೋಗಿದ್ದಾನೆ ಎಂದು ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್