ಸುದೀಪ್-ಕುಮಾರ್ ಸಂಧಾನ ವಿಫಲ?: ಇಂದು ಮುಂದುವರಿಕೆ

Public TV
1 Min Read

ನಿನ್ನೆ ರವಿಚಂದ್ರನ್ (Ravichandran) ನಿವಾಸದಲ್ಲಿ ಕಿಚ್ಚ ಸುದೀಪ್ (Sudeep) ಮತ್ತು ನಿರ್ಮಾಪಕ ಎನ್.ಕುಮಾರ್ (N. Kumar) ನಡುವಿನ ವಿವಾದ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಹೇಳಲಾಗಿತ್ತು. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ರವಿಚಂದ್ರನ್ ನಿವಾಸದಲ್ಲಿ ಸಂಧಾನ ಸಭೆ ರಾತ್ರಿ ಹತ್ತು ಗಂಟೆಯವರೆಗೂ ನಡೆದಿದೆ ಎಂದು ಹೇಳಲಾಗುತ್ತಿದೆ. ಸುದೀಪ್, ಕುಮಾರ್, ರಾಕ್ ಲೈನ್ ವೆಂಕಟೇಶ್, ಭಾ.ಮಾ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಆದರೆ, ನಿನ್ನೆಯ ಸಂಧಾನ ಯಶಸ್ವಿ ಆಗಿಲ್ಲ ಎಂದು ಹೇಳಲಾಗುತ್ತಿದೆ. ಕಿಚ್ಚ ಸುದೀಪ್ ಮತ್ತು ಕುಮಾರ್ ಪ್ರತ್ಯೇಕವಾಗಿ ತಮ್ಮ ನೋವುಗಳನ್ನು ಹೇಳಿಕೊಂಡಿದ್ದು, ಬಹುಶಃ ಎಂದು ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ನಿನ್ನೆಯ ಸಭೆಯಲ್ಲಿ ಶಿವರಾಜ್ ಕುಮಾರ್ ಗೈರಾಗಿದ್ದರು ಎಂದು ಹೇಳಲಾಗುತ್ತಿದೆ. ಇಂದು ಅವರು ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನುತ್ತವೆ ಬಲ್ಲ ಮೂಲಗಳು.

ಎನ್.ಕುಮಾರ್ ಈ ಹಿಂದೆ ಪ್ರತ್ಯೇಕವಾಗಿ ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಸುದೀಪ್ ಮತ್ತು ತಮ್ಮ ನಡುವಿನ ಮನಸ್ತಾಪವನ್ನು ಬಗೆ ಹರಿಸುವಂತೆ ವಿನಂತಿಸಿಕೊಂಡಿದ್ದರು. ತಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಿ ಎಂದು ಅವರು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ:ಕಾಶ್ಮೀರದಲ್ಲಿ ಸ್ಟೈಲ್‌ ಆಗಿ ಕಾಣಿಸಿಕೊಂಡ ಸಾನ್ಯ ಅಯ್ಯರ್

ಈ ನಡುವೆ ಕುಮಾರ್ ವಿರುದ್ಧ ಸುದೀಪ್ ಕೋರ್ಟ್ ಮೆಟ್ಟಿಲು ಏರಿದ್ದರಿಂದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತ್ತು. ತಾವು ಯಾವುದೇ ಸಂಧಾನಕ್ಕೆ ಬರುವುದಿಲ್ಲ ಕೋರ್ಟ್ ನಲ್ಲೇ ನ್ಯಾಯ ಸಿಗಲಿ ಎಂದು ಸುದೀಪ್ ಹೇಳಿಕೆ ನೀಡಿದ್ದರು. ಈ ಮಾತಿನ ಬೆನ್ನಲ್ಲೇ ಕುಮಾರ್ ವಾಣಿಜ್ಯ ಮಂಡಳಿಯ ಮುಂದೆ ಧರಣೆಗೆ ಕೂತಿದ್ದರು.

ರವಿಚಂದ್ರನ್ ಅವರ ಮಾತಿನಂತೆ ಪ್ರತಿಭಟನೆಯಿಂದ ಹಿಂದೆ ಸರಿದಿದ್ದ ಕುಮಾರ್, ಆನಂತರ ಶಿವರಾಜ್ ಕುಮಾರ್ ಅವರನ್ನೂ ಭೇಟಿ ಮಾಡಿದ್ದರು. ಇದೀಗ ರವಿಚಂದ್ರನ್ ಇಬ್ಬರನ್ನೂ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದಾರೆ. ಇಂದಿನ ಸಭೆಯ ನಂತರ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್