ಯುವತಿ ಮದ್ವೆಗೆ ಒಪ್ಪಿಲ್ಲ ಅಂತ 850 ಅಡಿಕೆ ಗಿಡ ನಾಶ ಮಾಡಿದ ಕಿರಾತಕ

By
1 Min Read

ಮೈಸೂರು: ಮಗಳನ್ನು ಕೊಟ್ಟು ಮದುವೆ ಮಾಡಲಿಲ್ಲ ಎಂಬ ದ್ವೇಷಕ್ಕೆ ಯುವತಿಯ ಪೋಷಕರು ಕಷ್ಟ ಪಟ್ಟು ಬೆಳೆದಿದ್ದ 850 ಅಡಿಕೆ ಗಿಡಗಳನ್ನು (Arcanut Trees) ನಾಶ ಮಾಡಿದ ಘಟನೆ ಹುಣಸೂರಿನ ಕಡೇ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಶೋಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅದೇ ಗ್ರಾಮದ ವೆಂಕಟೇಶ್ ಎಂಬವರ ಪುತ್ರಿಯನ್ನು ಅಶೋಕ್ ಎಂಬಾತನಿಗೆ ಕೊಟ್ಟು ವಿವಾಹ ಮಾಡಲು ಮಾತುಕತೆ ನಡೆದಿತ್ತು. ಆದರೆ ಹುಡುಗ ಸರಿಯಿಲ್ಲ ಎಂದು ಯುವತಿ ಮದುವೆ ನಿರಾಕರಿಸಿದ್ದಳು. ಇದೇ ದ್ವೇಷದಿಂದ ಆತ ಮೊದಲಿಗೆ ಅರ್ಧ ಎಕರೆಯಲ್ಲಿ ಬೆಳೆದಿದ್ದ ಶುಂಠಿಯನ್ನ ನಾಶ ಮಾಡಿದ್ದ. ಇದನ್ನೂ ಓದಿ: ಕರ್ನಾಟಕ ಸುವರ್ಣ ಮಹೋತ್ಸವ – ಸಾಹಿತಿಗಳ ಸಲಹೆ ಪಡೆದ ಶಿವರಾಜ್ ತಂಗಡಗಿ

ಈಗ ಜಮೀನಿಗೆ ನುಗ್ಗಿ ಮೂರು ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಗಿಡಗಳ ನಾಶ ಮಾಡಿದ್ದಾನೆಂದು ಯುವತಿಯ ತಂದೆ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇನ್‍ಸ್ಟಾದಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಅಪ್ಲೋಡ್ ಪ್ರಕರಣ – ಆರೋಪಿ ಅರೆಸ್ಟ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್