ಗುದ್ದಲಿ ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ?- ಬಿಜೆಪಿಗೆ ಹೆಬ್ಬಾಳ್ಕರ್ ತಿರುಗೇಟು

Public TV
1 Min Read

ಉಡುಪಿ: ಕಾಂಗ್ರೆಸ್ ಕಮಿಷನ್ ತಂದೆಯ ಬಗ್ಗೆ ಬಿಜೆಪಿ ಆರೋಪ ಶುರು ಮಾಡಿದೆ. ಪೇ ಸಿಎಂ ಕಮಿಷನ್ ಕಾಂಗ್ರೆಸ್ಸಿಗೆ ತಿರುಗುಬಾಣವಾಗಿದೆ. ಕೃಷಿ ಸಚಿವರ ಮೇಲೆ ಕಮಿಷನ್ ಆರೋಪ ಇದ್ದು ಸಿಐಡಿ (CID) ತನಿಖೆ ಮಾಡುತ್ತಿದೆ. ಬಿಜೆಪಿಯ (BJP) ಈ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ (Usupi) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಹೊಸ ಯೋಜನೆಗಳನ್ನು ಮಾಡಿದರೆ ಮಾತ್ರ ಕಮಿಷನ್ ವಿಚಾರ ಬರುತ್ತದೆ. ಹೊಸ ಗುದ್ದಲಿ ಪೂಜೆ ಟೆಂಡರ್ ಆದರೆ ಕಮಿಷನ್ ವಿಚಾರ ಬರುತ್ತದೆ. ಆನ್ ಗೋಯಿಂಗ್ ಕಾಮಗಾರಿಗಳು ನಡೆಯುತ್ತಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರುತ್ತದೆ? ಹೇಗೆ ಬರುತ್ತದೆ ಎಂದು ಪ್ರಶ್ನಿಸಿದರು.

ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳು ಇಲ್ಲ. ಬಿಬಿಎಂಪಿ ವಿಚಾರದಲ್ಲಿ ಬಂದಿರುವ ಆರೋಪ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಮುಖ್ಯಮಂತ್ರಿಗಳೇ ಈ ಬಗ್ಗೆ ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ಬೋಗಸ್ ಬಿಲ್ ಆಗಿದೆಯಾ ಎಂದು ತನಿಖಾ ತಂಡ ವಿಚಾರಣೆ ಮಾಡುತ್ತದೆ ಎಂದು ಹೆಬ್ಬಾಳ್ಕರ್ ಹೇಳಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್