ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಕಾರು – ಚಾಲಕ ಸಾವು

By
1 Min Read

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಐದು ಪಲ್ಟಿಯಾಗಿ ಅಂಗಡಿಗಳಿಗೆ ಗುದ್ದಿದ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದೆ. ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತನನ್ನು ಸಲೀಂ (34) ಎಂದು ಗುರುತಿಸಲಾಗಿದೆ. ಸಿಂಧನೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ತಿರುವಿನಲ್ಲಿ ಕಾರು ಅತಿಯಾದ ವೇಗದಲ್ಲಿ ಚಲಾಯಿಸಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವೇಗದ ಪರಿಣಾಮ ಅಪಘಾತದ ಬಳಿಕ ಕಾರು ರಸ್ತೆ ಪಕ್ಕದ ಅಂಗಡಿಗಳಿಗೂ ಗುದ್ದಿದೆ. ಇದನ್ನೂ ಓದಿ: ಮೇರಾ ಬಿಲ್ ಮೇರಾ ಅಧಿಕಾರ್ – ಬಿಲ್ ಕೇಳಿ 1 ಕೋಟಿ ರೂ. ಬಹುಮಾನ ಗೆಲ್ಲಿ

ಈ ಸಂಬಂಧ ರಾಯಚೂರು ಗ್ರಾಮೀಣ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ರಿಮ್ಸ್ ಆಸ್ಪತ್ರೆಗೆ ಶವಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟ್‌ ದಂತಕಥೆ ಹೀತ್ ಸ್ಟ್ರೀಕ್ ನಿಧನ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್