ಸುದೀಪ್, ದರ್ಶನ್ ಸಂಧಾನದ ಬಗ್ಗೆ ಸುಮಲತಾ ಪ್ರತಿಕ್ರಿಯೆ

By
1 Min Read

60ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆ ಅಂಬಿ ಸಮಾಧಿ ಬಳಿ ಆಗಮಿಸಿ ವಿಶೇಷ ಪೂಜೆಯನ್ನ ಸುಮಲತಾ ಸಲ್ಲಿಸಿದ್ದಾರೆ. ಈ ವರ್ಷದ ಹುಟ್ಟುಹಬ್ಬ ಆಚರಣೆಯ ಬಗ್ಗೆ ಮತ್ತು ಸುದೀಪ್- ದರ್ಶನ್ (Darshan) ಸಂಧಾನದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

ಇದು ನಮ್ಮ ವೈಯಕ್ತಿಕ ಬದುಕಿನ ಕಾರ್ಯಕ್ರಮವಾಗಿದೆ. ಫ್ಯಾಮಿಲಿ ಅಂದ ಮೇಲೆ ಎಲ್ಲರೂ ಒಂದೇನೆ. ಅವರು ಬೇರೇ ರೀತಿಯಲ್ಲಿ ಇರೋಲ್ಲ. ನಾವೆಲ್ಲರೂ ಒಂದೇ ಕುಟುಂಬದವರು ಅನ್ನೋ ಹಾಗೆ ಇರುತ್ತಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡೋಕೆ ಇಷ್ಟಪಡಲ್ಲ, ಇದು ತೀರಾ ಪರ್ಸನಲ್‌ ವಿಚಾರ ಎಂದು ಸುಮಲತಾ ಮಾತನಾಡಿದ್ದಾರೆ. ಇದನ್ನೂ ಓದಿ:60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ- ಸಂಭ್ರಮದಲ್ಲಿ ಭಾಗಿಯಾದ ಸ್ಟಾರ್ಸ್

ಸುಮಲತಾ (Sumalatha) ಹುಟ್ಟುಹಬ್ಬದ ಪ್ರಯುಕ್ತ ಗ್ರ್ಯಾಂಡ್ ಬರ್ತ್‌ಡೇ ಪಾರ್ಟಿಯನ್ನ ಶನಿವಾರ ರಾತ್ರಿ (ಆಗಸ್ಟ್ 26) ಆಯೋಜಿಸಲಾಗಿತ್ತು. ಈ ವೇಳೆ ಒಂದೇ ವೇದಿಕೆಯಲ್ಲಿ ಸುಮಲತಾ ಬರ್ತ್‌ಡೇ ಸೆಲೆಬ್ರೇಶನ್‌ನಲ್ಲಿ ಸುದೀಪ್(Sudeep)- ದರ್ಶನ್ ಭಾಗಿಯಾಗಿದ್ದರು. ಪಾರ್ಟಿ ಫೋಟೋ ವೈರಲ್ ಬೆನ್ನಲ್ಲೇ ಕಿಚ್ಚ-ದಚ್ಚು ರಾಜಿ ಸಂಧಾನ ನಡೆದಿದೆ ಎನ್ನಲಾಗಿತ್ತು. ಸುಮಲತಾ ಅವರೇ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಹೇಳಲಾಗಿತ್ತು. ಇದು ನಿಜಾನಾ? ಇಬ್ಬರು ಸ್ಟಾರ್ ನಟನ ರಾಜಿ ಸಂಧಾನ ಆಗಿದ್ಯಾ? ಅಸಲಿ ವಿಚಾರವೇನು ಎಂಬುದನ್ನ ಕಾದುನೋಡಬೇಕಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್